ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲೇಷಿಯನ್ ಇನ್ವಿಟೇಷನಲ್ ಏಜ್ ಗ್ರೂಪ್ ಚಾಂಪಿಯನ್ಶಿಪ್ನಲ್ಲಿ ಭಾರತಕ್ಕೆ 5 ಚಿನ್ನದ ಪದಕ ತಂದುಕೊಟ್ಟ ಮಾಧವನ್ ಪುತ್ರನಿಗೆ ನಟ ಸೂರ್ಯ, ಅನುಷ್ಕಾ ಸೇರಿದಂತೆ ಅನೇಕರಿಂದ ಅಭಿನಂದನೆ ಸಲ್ಲಿಸಿದ್ದಾರೆ.
ಸಾಮಾನ್ಯವಾಗಿ ಕಲಾವಿದರ ಮಕ್ಕಳು ಸ್ಟಾರ್ ಆಗಬೇಕು, ಸಿನಿಮಾರಂಗದಲ್ಲಿ ಗುರುತಿಸಿಕೊಳ್ಳಬೇಕು ಎಂದು ಬಯಸುತ್ತಾರೆ. ಆದರೆ ಖ್ಯಾತ ನಟ ಆರ್ ಮಾಧವನ್ ಪುತ್ರ ವೇದಾಂತ್ ಕ್ರೀಡೆಯಲ್ಲಿ ಗುರುತಿಸಿಕೊಂಡಿದ್ದು,5 ಚಿನ್ನದ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಹೆಮ್ಮೆ ತಂದಿದ್ದಾರೆ.
ಮಾಧವನ್ ಪುತ್ರ ಅದ್ಭುತ ಸ್ವಿಮ್ಮರ್. ಚಿಕ್ಕ ವಯಸ್ಸಿನಿಂದನೇ ಸ್ವಿಮ್ಮಿಂಗ್ ಟ್ರೇನಿಂಗ್ ಪಡೆಯುತ್ತಿದ್ದ ವೇದಾಂತ್ ಈಗಾಗಲೇ ಅನೇಕ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ.
ಮಗನ ಸಾಧನೆಯನ್ನು ನಟ ಮಾಧವನ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ದೇವರ ಅನುಗ್ರ ಎಂದಿರುವ ಮಾಧವನ್, ‘ನಿಮ್ಮೆಲ್ಲರ ಶುಭ ಹಾರೈಕೆಯಿಂದ ವೇದಾಂತ್ ಭಾರತಕ್ಕೆ 5 ಚಿನ್ನದ ಪದಕ ತಂದುಕೊಟ್ಟಿದ್ದಾನೆ. ಕೌಲಾಲಂಪುರ್ನಲ್ಲಿ ನಡೆದ ಮಲೇಷಿಯನ್ ಚಾಂಪಿಯನ್ಶಿಪ್ನಲ್ಲಿ 50 ಮೀಟರ್, 100 ಮೀಟರ್, 200 ಮೀಟರ್, 400 ಮೀಟರ್ ಹಾಗೂ 1500 ಮೀಟರ್ ಸ್ವಿಮಿಂಗ್ ರೇಸ್ ಗೆದ್ದಿದ್ದಾರೆ. ನನಗೆ ಹೆಮ್ಮೆ ಆಗುತ್ತಿದೆ’ ಎಂದು ಮಾಧವನ್ ಬರೆದುಕೊಂಡಿದ್ದಾರೆ.
ಮಾಧವನ್ ಪೋಸ್ಟ್ಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ತಮಿಳು ಸ್ಟಾರ್ ಸೂರ್ಯ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ, ಲಾರಾ ದತ್ತ ಸೇರಿದಂತೆ ಅನೇಕರು ವೇದಾಂತ್ಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.