ಮಡಿಕೇರಿ: ಮನೆ ನಿರ್ಮಾಣಕ್ಕೆ 20 ಮಂದಿಗೆ ಹಕ್ಕುಪತ್ರ ವಿತರಣೆ

ಹೊಸದಿಗಂತ ವರದಿ, ಮಡಿಕೇರಿ:
ಮಡಿಕೇರಿ: ಅಕ್ರಮ ಸಕ್ರಮ ಯೋಜನೆಯಡಿ ಮೂವರಿಗೆ ಸಾಗುವಳಿ ಚೀಟಿ ಹಾಗೂ 94ಸಿ ರಡಿ 20 ಮಂದಿಗೆ ಮನೆ ನಿರ್ಮಾಣಕ್ಕೆ ಹಕ್ಕುಪತ್ರವನ್ನು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ತಮ್ಮ ಕಚೇರಿಯಲ್ಲಿ ವಿತರಿಸಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಮಡಿಕೇರಿ ಹೋಬಳಿಯ ಅರ್ಹರಿಗೆ ಮನೆ ಹಕ್ಕುಪತ್ರ ಹಾಗೂ ಸಾಗುವಳಿ ಚೀಟಿ ವಿತರಿಸಲಾಯಿತು.
ಬಳಿಕ ಮಾತನಾಡಿದ ಶಾಸಕರು, ಭೂಮಿ ಹಕ್ಕುಪತ್ರವನ್ನು ಯಾವುದೇ ಕಾರಣಕ್ಕೂ ಮಾರಿಕೊಳ್ಳಬಾರದು. ಸರ್ಕಾರದ ಯೋಜನೆಗಳನ್ನು ಸರಿಯಾಗಿ ಬಳಸಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳುವತ್ತ ಗಮನಹರಿಸಬೇಕು ಎಂದು ಸಲಹೆ ಮಾಡಿದರು.
ಭೂಮಿ ಮಾರಿಕೊಂಡಲ್ಲಿ ಪೈಸಾರಿ ಜಾಗ ಎಂದು ಪ್ರಕಟಿಸಬೇಕಾಗುತ್ತದೆ. ಆದ್ದರಿಂದ ಯಾರೂ ಸಹ ಸಾಗುವಳಿ ಚೀಟಿ ಅಥವಾ ಹಕ್ಕುಪತ್ರ ಮಾರಿಕೊಳ್ಳಬಾರದು ಎಂದು ಅವರು ಕಿವಿಮಾತು ಹೇಳಿದರು.
ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರಾದ ಎಂ.ಎನ್.ಕುಮಾರಪ್ಪ, ಸುಮಾ ಸುದೀಪ್, ಡಿ.ಆರ್.ಕೆಂಚೇಶ್ವರ್, ತಹಶೀಲ್ದಾರ್ ಪಿ.ಎಸ್.ಮಹೇಶ್, ಶಿರಸ್ತೇದಾರ್ ಗುರುರಾಜ್ ಮತ್ತಿತರರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!