ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆದ ಮಹಾಕುಂಭಮೇಳವನ್ನು ಪ್ರಧಾನಿ ಮೋದಿ‘ ಏಕತೆಯ ಮಹಾಯಜ್ಞ’ ಎಂದು ಬಣ್ಣಿಸಿದ್ದಾರೆ.
ಈ ಕುರಿತು ಬ್ಲಾಗ್ ಬರೆದಿದ್ದು, ಕಾರ್ಯಕ್ರಮವನ್ನು ಐತಿಹಾಸಿಕವಾಗಿ ಯಶಸ್ವಿಗೊಳಿಸಲು ಒಟ್ಟಾಗಿ ಬಂದ 140 ಕೋಟಿ ಭಾರತೀಯರ ಭಕ್ತಿ ಮತ್ತು ಭಾಗವಹಿಸುವಿಕೆಗೆ ಆಳವಾದ ಮೆಚ್ಚುಗೆ ವ್ಯಕ್ತಪಡಿಸಿದರು.
ಒಂದೇ ನದಿಯ ದಡದಲ್ಲಿ, ತ್ರಿವೇಣಿ ಸಂಗಮದಲ್ಲಿ, ಕೋಟ್ಯಂತರ ಸಂಖ್ಯೆಯಲ್ಲಿ ಜನರು ಹೇಗೆ ಒಟ್ಟುಗೂಡಿದರು ಎಂಬುದನ್ನು ನೋಡಿ ಇಡೀ ಜಗತ್ತು ಆಶ್ಚರ್ಯಚಕಿತವಾಗಿದೆ. ಈ ಕೋಟ್ಯಂತರ ಜನರಿಗೆ ಔಪಚಾರಿಕ ಆಹ್ವಾನವೂ ಇರಲಿಲ್ಲ ಅಥವಾ ಅವರು ಯಾವ ಸಮಯಕ್ಕೆ ಬರಬೇಕೆಂಬುದರ ಬಗ್ಗೆ ಯಾವುದೇ ಪೂರ್ವ ಮಾಹಿತಿಯೂ ಇರಲಿಲ್ಲ. ಹೀಗೆ ಜನರು ಮಹಾ ಕುಂಭಕ್ಕೆ ಹೊರಟರು. ಮತ್ತು ಪವಿತ್ರ ಸಂಗಮದಲ್ಲಿ ಸ್ನಾನ ಮಾಡಿ ಆಶೀರ್ವಾದ ಪಡೆದರು ಎಂದಿದ್ದಾರೆ.
ಆ ಚಿತ್ರಗಳನ್ನು ನಾನು ಮರೆಯಲು ಸಾಧ್ಯವಿಲ್ಲ ಸ್ನಾನದ ನಂತರ ಅಪಾರ ಸಂತೋಷ ಮತ್ತು ತೃಪ್ತಿಯಿಂದ ತುಂಬಿದ ಆ ಮುಖಗಳನ್ನು ನಾನು ಮರೆಯಲು ಸಾಧ್ಯವಿಲ್ಲ. ಮಹಿಳೆಯರು, ವೃದ್ಧರು ಅಥವಾ ದಿವ್ಯಾಂಗರು, ಎಲ್ಲರೂ ಸಂಗಮಕ್ಕೆ ಬಂದಿದ್ದರು ಎಂದು ಮೋದಿ ಹೇಳಿದ್ದಾರೆ. ಮಹಾಕುಂಭ ಮೇಳಕ್ಕೆ 45 ದಿನಗಳಲ್ಲಿ 66 ಕೋಟಿಗೂ ಅಧಿಕ ಮಂದಿ ಭೇಟಿ ನೀಡಿದ್ದಾರೆ ಎಂದಿದ್ದಾರೆ.
महाकुंभ संपन्न हुआ…एकता का महायज्ञ संपन्न हुआ। प्रयागराज में एकता के महाकुंभ में पूरे 45 दिनों तक जिस प्रकार 140 करोड़ देशवासियों की आस्था एक साथ, एक समय में इस एक पर्व से आकर जुड़ी, वो अभिभूत करता है! महाकुंभ के पूर्ण होने पर जो विचार मन में आए, उन्हें मैंने कलमबद्ध करने का… pic.twitter.com/TgzdUuzuGI
— Narendra Modi (@narendramodi) February 27, 2025