ವೇಣೂರಿನ ಬಾಹುಬಲಿ ಸ್ವಾಮಿಗೆ ಇಂದಿನಿಂದ ಮಹಾಮಸ್ತಕಾಭಿಷೇಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವೇಣೂರಿನ ಭಗವಾನ್ ಶ್ರೀಬಾಹುಬಲಿ ಸ್ವಾಮಿಗೆ ಇಂದಿನಿಂದ ಒಂಬತ್ತು ದಿನಗಳ ಮಹಾಮಸ್ತಕಾಭಿಷೇಕ ನಡೆಯಲಿದೆ.

ಹನ್ನೆರಡು ವರ್ಷಗಳಿಗೊಮ್ಮೆ ಮಹಾಮಸ್ತಕಾಭಿಷೇಕ ನೆರವೇರಲಿದ್ದು, ಇಡೀ ಜಗತ್ತೇ ಈ ಸಂಭ್ರಮವನ್ನು ಎದುರು ನೋಡುತ್ತದೆ. ಒಂಬತ್ತು ದಿನಗಳು ಜಲಾಭಿಷೇಕ, ಕಷಾಯ, ಕಲ್ಕಚೂರ್ಣ, ಅರಿಶಿಣ, ಶ್ರೀಗಂಧ, ಅಷ್ಟಗಂಧ, ಹಾಲು, ಎಳನೀರು ಹಾಗೂ ಕೇಸರಿ ದ್ರವ್ಯಗಳಿಂದ ಅಭಿಷೇಕ ನಡೆಯಲಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ಮಸ್ತಕಾಭಿಷೇಕ ನಡೆಯಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!