ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಮಹಾರಾಣಾ ಪ್ರತಾಪನ ಆಳೆತ್ತರದ ಪ್ರತಿಮೆಯನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅನಾವರಣಗೊಳಿಸಿದರು.
ಬಳಿಕ ಮಾತನಾಡಿದ ಸಿಂಗ್, ಔರಂಗಜೇಬ್ ಅಥವಾ ಬಾಬರ್ ಅವರನ್ನು ವೈಭವೀಕರಿಸುವವರು ದೇಶದ ಮುಸ್ಲಿಮರನ್ನು ಅವಮಾನಿಸಿದಂತೆ. ಮಹಾರಾಣಾ ಪ್ರತಾಪ್ ಮತ್ತು ಛತ್ರಪತಿ ಶಿವಾಜಿ ಮಹಾರಾಜರು ರಾಷ್ಟ್ರೀಯ ವೀರರು. ಅವರು ನಮ್ಮ ದೇಶದ ಹೀರೋಗಳೇ ವಿನಃ ಮೊಘಲ್ ಚಕ್ರವರ್ತಿ ಔರಂಗಜೇಬನಲ್ಲ ಎಂದು ಹೇಳಿದ್ದಾರೆ.
ಮಹಾರಾಣಾ ಪ್ರತಾಪ್ ಧೈರ್ಯ ಮತ್ತು ದೇಶಭಕ್ತಿಯ ಸಂಕೇತ. ಛತ್ರಪತಿ ಶಿವಾಜಿ ಮಹಾರಾಜರು, ಮಹಾರಾಣಾ ಪ್ರತಾಪ್ ಅವರಿಂದ ಸ್ಫೂರ್ತಿ ಪಡೆದರು. ವಿಶೇಷವಾಗಿ ಗೆರಿಲ್ಲಾ ಯುದ್ಧ ತಂತ್ರಗಳಲ್ಲಿ ಅವರು ಸ್ಫೂರ್ತಿ ಪಡೆದಿದ್ದರು. ಸ್ವಾತಂತ್ರ್ಯಾನಂತರದ ಎಡಪಂಥೀಯ ಒಲವನ್ನು ಹೊಂದಿರುವ ಇತಿಹಾಸಕಾರರು ರಾಣಾ ಪ್ರತಾಪ್ ಮತ್ತು ಶಿವಾಜಿ ಮಹಾರಾಜರಿಗೆ ಸರಿಯಾದ ಮನ್ನಣೆ ನೀಡಲಿಲ್ಲ. ಆದರೆ ಔರಂಗಜೇಬನನ್ನು ಶ್ಲಾಘಿಸಿದರು ಎಂದು ಟೀಕಿಸಿದ್ದಾರೆ.
ಛತ್ರಪತಿ ಶಿವಾಜಿ ಮಹಾರಾಜರ ಸೈನ್ಯದಲ್ಲಿಯೂ ಮುಸ್ಲಿಂ ಸಮುದಾಯದ ಜನರಿದ್ದರು. ಛತ್ರಪತಿ ಶಿವಾಜಿ ಮಹಾರಾಜರ ಅಂಗರಕ್ಷಕರಲ್ಲಿ ಅತ್ಯಂತ ವಿಶ್ವಾಸಾರ್ಹ ವ್ಯಕ್ತಿಯೆಂದರೆ ಮದರಿ ಎಂಬ ಮುಸ್ಲಿಂ ಯುವಕ. ಅಂತಹ ಮಹಾರಾಣಾ ಪ್ರತಾಪ್ ಮತ್ತು ಛತ್ರಪತಿ ಶಿವಾಜಿ ಮಹಾರಾಜರು ನಮ್ಮ ನಾಯಕರು ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.