ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಂದುವರಿದಿದೆ. ಗಡಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಕೆಲ ದಿನಗಳಿಂದ ಪ್ರತಿಭಟನೆಗಳು ನಡೆಯುತ್ತಿವೆ. ನಿನ್ನೆ ಪ್ರತಿಭಟನಾಕಾರರು ಮಂಗಳವಾರ ಮಹಾರಾಷ್ಟ್ರ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಗಳ ಮೇಲೆ ದಾಳಿ ನಡೆಸಿ, ಬಸ್ಗಳ ಮೇಲೆ ಕಲ್ಲು ಎಸೆದು ಗಾಜುಗಳನ್ನು ಪುಡಿ ಪುಡಿ ಮಾಡಿದ್ದರು. ಜೊತೆಗೆ ಮಹಾ ಸಚಿವರು ರಾಜ್ಯಕ್ಕೆ ಬರದಂತೆ ತಡೆಯಲು ಆದೇಶ ಕೂಡ ಜಾರಿಯಾಗಿತ್ತು.
ಈ ಹಿನ್ನೆಲೆ ಮಹಾರಾಷ್ಟ್ರ ರಸ್ತೆ ಸಾರಿಗೆ ಇಲಾಖೆ ಕರ್ನಾಟಕಕ್ಕೆ ಬಸ್ ಸಂಚಾರವನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದೆ. ಕರ್ನಾಟಕದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮಹಾರಾಷ್ಟ್ರ ಪೊಲೀಸರು ಅಲ್ಲಿಗೆ ಬಸ್ ಓಡಿಸುವುದು ಸೂಕ್ತವಲ್ಲ ಎಂದು ಎಚ್ಚರಿಸಿದ್ದಾರೆ. ಪೊಲೀಸರು ಅನುಮತಿ ನೀಡಿದ ನಂತರವೇ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಹೇಳಲಾಗಿದೆ.