ಮಹಾರಾಷ್ಟ್ರದ ಸಚಿವರು ಬೆಳಗಾವಿ ಪ್ರವೇಶಿಸದಂತೆ ನಿಷೇಧ: ಬಿಗಿ ಪೊಲೀಸ್ ಬಂದೋಬಸ್ತ್

ಹೊಸದಿಗಂತ ವರದಿ ಬೆಳಗಾವಿ :

ಮಹಾರಾಷ್ಟ್ರದ ಇಬ್ಬರು ಸಚಿವರು ಓರ್ವ ಸಂಸದರಿಗೆ ಬೆಳಗಾವಿ ಜಿಲ್ಲೆ ಪ್ರವೇಶಿಸದಂತೆ ನಿಷೇಧಿಸಲಾಗಿದೆ. ಇದರ ಮಧ್ಯೆ ಅವರು ಬೆಳಗಾವಿಗೆ ಆಗಮಿಸದಂತೆ
ಜಿಲ್ಲೆ ಸೇರಿದಂತೆ ಬೆಳಗಾವಿ ಮಹಾನಗರದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ ವ್ಯವಸ್ಥೆ ಕಲ್ಪಿಸಲಾಗಿದ್ದು ಮಹಾರಾಷ್ಟ್ರದಿಂದ ಬೆಳಗಾವಿ ಜಿಲ್ಲೆಯ ಗಡಿ ಪ್ರದೇಶದಲ್ಲಿ ಪೊಲೀಸ್ ಪಡೆ ಸಜ್ಜಾಗಿದೆ.

ಜಿಲ್ಲಾಧಿಕಾರಿ ನಿತೀಶ್ ಪಾಟೀಲ ಅವರ ನಿಷೇಧಜ್ಞಾನೆ ಉಲ್ಲಂಘನೆ ಮಾಡಿ ಸಚಿವರು ಬರುವ ಹಿನ್ನಲೆಯಲ್ಲಿ ನಿಪ್ಪಾಣಿಯ ಕುಗನೋಳಿ ಟೋಲ್ ಗೇಟ್ ಸೇರಿದಂತೆ ಮಹಾರಾಷ್ಟ್ರದಿಂದ ಬೆಳಗಾವಿ ಜಿಲ್ಲೆಯನ್ನು ಸಂಪರ್ಕಿಸುವ ಎಲ್ಲ ರಸ್ತೆಗಳಲ್ಲಿ ಕರ್ನಾಟಕ ಪೊಲೀಸರು ತೀವ್ರ ನಿಗಾ ಇಟ್ಟಿದ್ದಾರೆ. ಮಹಾರಾಷ್ಟ್ರದಿಂದ ಆಗಮಿಸುತ್ತಿರುವ ಪ್ರತಿಯೊಂದು ವಾಹನಗಳನ್ನು ತಪಾಸಣೆಯನ್ನು ಪೊಲೀಸರು ನಡೆಸುತ್ತಿದ್ದಾರೆ.
ಇದರ ಮಧ್ಯೆ ಮಂಗಳವಾರ ಬೆಳಗಾವಿಗೆ ಕರವೇ ರಾಜ್ಯಾಧ್ಯಕ್ಷ ಟಿ.ಎಸ್.ನಾರಾಯಣಗೌಡ ಆಗಮಿಸುತ್ತಿದ್ದು, ಅವರನ್ನು ಹಿರೇಬಾಗೇವಾಡಿ ಟೋಲ್ ಬಳಿ ತಡೆಯಲು ಪೊಲೀಸರು ಬಿಗಿ ಸರ್ಪಗಾವಲು ಹಾಕಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!