ಪಾರ್ಶ್ವವಾಯುಗೆ ತುತ್ತಾದ ಮಹಾರಾಷ್ಟ್ರ ಸಚಿವ ಧನಂಜಯ ಮುಂಡೆ; ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಮಹಾರಾಷ್ಟ್ರದ ಸಚಿವ ಧನಂಜಯ ಮುಂಡೆ ಅವರಿಗೆ ಪಾರ್ಶ್ವವಾಯು (ಲಕ್ವ) ಕಾಣಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಹಾ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಖಾತೆ ನಿರ್ವಹಿಸುವ ಎನ್‌ಸಿಪಿ ಮುಖಂಡ ಧನಂಜಯ(46) ಅವರು ಮಂಗಳವಾರ ರಾತ್ರಿ ಪಾರ್ಶ್ವವಾಯುವಿಗೆ ತುತ್ತಾಗಿದ್ದಾರೆ.
ಮಂಗಳವಾರ ಎಂದಿನಂತೆ ದೈನಂದಿನ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಧನಂಜಯ ರಾತ್ರಿವೇಳೆ ಸಮಯದಲ್ಲಿ ತಮ್ಮ ನಿವಾಸದಲ್ಲಿದ್ದಾಗ ಏಕಾಏಕಿ ಆರೋಗ್ಯದಲ್ಲಿ ವ್ಯತ್ಯಯವಾಗಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪಾರ್ಶ್ವವಾಯು ಕಾಣಿಸಿಕೊಂಡಿದೆ ಎಂಬುದು ತಿಳಿದುಬಂದಿದೆ ಎಂದು ಸಚಿವರ ಆಪ್ತಮೂಲಗಳು ತಿಳಿಸಿವೆ. ವೈದ್ಯಕೀಯ ಪರೀಕ್ಷೆಗಳ ನಂತರ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!