ಹೊಸದಿಗಂತ ಡಿಜಿಟಲ್ ಡೆಸ್ಕ್:
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಅಂಡರ್ವರ್ಲ್ಡ್ನ ಇನ್ನಿತರ ಕೇಸ್ಗೆ ಸಂಬಂಧಪಟ್ಟಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದ ಬೆನ್ನತ್ತಿರುವ ಜಾರಿ ನಿರ್ದೇಶನಾಲಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಸಿಪಿ ನಾಯಕ ಹಾಗೂ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರನ್ನುಬುಧವಾರ ಬಂಧಿಸಿದೆ.
ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ದಾವೂದ್ ಇಬ್ರಾಹಿಂ, ಆತನ ಸಹೋದರ ಅನೀಸ್ ಇಕ್ಬಾಲ್, ಸಹಾಯಕ ಚೋಟಾ ಶಕೀಲ್ ಮತ್ತು ಇತರರ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಅಕ್ರಮ ಹಣವರ್ಗಾವಣೆ ಕೇಸ್ ದಾಖಲಿಸಿರುವ ಇ.ಡಿ., ಅನೇಕ ರಾಜಕಾರಣ ಮೇಲೆ ಕಣ್ಗಾವಲು ಇಟ್ಟಿತ್ತು.
ಕಳೆದ ವಾರ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನಲ್ಲಿರುವ ದಾವೂದ್ ಇಬ್ರಾಹಿಂ ಸಹೋದರಿ ಹಸೀನಾ ಪರ್ಕರ್ ಅವರ ನಿವಾಸದ ಮೇಲೆ ಇಡಿ ದಾಳಿ ನಡೆಸಿತ್ತು.
ಹಾಗೇ, ನವಾಬ್ ಮಲಿಕ್ರನ್ನು ಇಂದು ಬೆಳಗ್ಗೆ 8ಗಂಟೆಯಿಂದ ಇ.ಡಿ.ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು.ಇದೀಗ, ಆರು ಗಂಟೆಗಳ ವಿಚಾರಣೆಯ ನಂತರ, ನವಾಬ್ ಮಲಿಕ್ ಅವರನ್ನು ಇಡಿ ಬಂಧಿಸಿದೆ.