ಯೋಗ ಚಾಂಪಿಯನ್ ಶಿಪ್‌ನಲ್ಲಿ ಹೊನ್ನಾವರದ ಮಹೇಂದ್ರ ಗೌಡ ರಾಷ್ಟ್ರಮಟ್ಟಕ್ಕೆ ಆಯ್ಕೆ

ಹೊಸಗಂತ ವರದಿ, ಹೊನ್ನಾವರ:
ಬೆಂಗಳೂರು ಬಿಬಿಎಂಪಿ ಕೇಂದ್ರ ಕಚೇರಿಯ ಡಾ. ರಾಜಕುಮಾರ ಗಾಜಿನ ಮನೆಯಲ್ಲಿ ರಾಜ್ಯ ಯೋಗಾಸನ ಕ್ರೀಡಾ ಸಂಘದಿಂದ ಆಯೋಜಿಸಲಾಗಿದ್ದ ಯೋಗಾಸನ ಕ್ರೀಡಾ ಚಾಂಪಿಯನ್ ಶಿಪ್ ನಲ್ಲಿ ಗೆಲುವು ಸಾಧಿಸಿರುವ ತಾಲೂಕಿನ ಖರ್ವಾ ನಾಥಗೇರಿಯ ಮಹೇಂದ್ರ ಗಣಪತಿ ಗೌಡ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮಹೇಂದ್ರ ಅವರು ಪಟ್ಟಣದ ದಿ.ಮೋಹನ್ ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ವ್ಯಾಸಂಗ ಮಾಡುತ್ತಿದ್ದಾರೆ. ಇವರಿಗೆ ಖರ್ವಾ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ- ಯೋಗಪಟು ರಾಜೇಶ್ವರಿ ಹೆಗಡೆ ತರಬೇತಿ ನೀಡಿದ್ದಾರೆ.
ಸಾಂಪ್ರದಾಯಿಕ ಯೋಗಾಸನ, ಆರ್ಟಿಸ್ಟಿಕ್ ಯೋಗಾಸನ, ರಿದಮಿಕ್ ಯೋಗಾಸನ ಮಾದರಿಯಲ್ಲಿ ಯೋಗ ಪ್ರದರ್ಶನ ಏರ್ಪಡಿಸಲಾಗಿತ್ತು. ಈ ಪಂದ್ಯಾವಳಿಯಲ್ಲಿ ವಿಜೇತರಾದ ಪ್ರತಿ ವಿಭಾಗದ ತಲಾ ಐವರು ನವೆಂಬರ್ 26-27 ರಂದು ಮುಂಬೈನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಅರ್ಹತೆ ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!