ಹೊಸದಿಗಂತ ವರದಿ ಹುಬ್ಬಳ್ಳಿ:
ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ಅವರು ಗೋಕುಲ ರಸ್ತೆ ಬಸವೇಶ್ವರ ನಗರದ ಸರ್ಕಾರಿ ಶಾಲೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತ ಹಾಕಿದರು.
ಕುಟುಂಬ ಸಮೇತ ಮತದಾನ ಕೇಂದ್ರಕ್ಕೆ ಭೇಟಿ ನೀಡದ ಅವರು, ಮತಹಾಕಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲ ಮತ ಕೇಂದ್ರಗಳಲ್ಲಿ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಳೆದ ಬಾರಿಗಿಂತ ಎಲ್ಲ ಮತ ಕೇಂದ್ರಗಳಲ್ಲಿ ಮತದಾನ ಹೆಚ್ಚಾಗಿತ್ತಿದೆ ಎಂದರು.
ಸಾರ್ವಜನಿಕರಲ್ಲಿ ಬದಲಾವಣೆ ಏನು ಭಯಸಿದ್ದಾರೆ ಅದು ನಿಜವಾಗುವ ಸಮಯ ಬಂದಿದೆ. ದೊಡ್ಡದಾದ ಜಯವನ್ನು ಬಿಜೆಪಿ ಗೆಲ್ಲುತ್ತದೆ. ಅತೀ ಹೆಚ್ಚು ಬಹುಮತದಿಂದ ಜಯಗಳಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.