ಸಕ್ಕರೆ ನಾಡಲ್ಲಿ ‘ಮೈತ್ರಿ’ ರಣಕಹಳೆ: ಇಂದಿನಿಂದ ದಳಪತಿಗಳ ಭರ್ಜರಿ ಕ್ಯಾಂಪೇನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಇಂದಿನಿಂದ ಮಂಡ್ಯ ಲೋಕಸಭಾ ಕ್ಷೇತ್ರದ ಅಖಾಡಕ್ಕಿಳಿದಿದ್ದಾರೆ. ಮಂಡ್ಯದಲ್ಲಿ ಇಂದಿನಿಂದ ಚುನಾವಣಾ ಸಭೆ ನಡೆಸುವ ಮೂಲಕ ಎಚ್‌ಡಿಕೆ ಮತ ಯಾಚನೆ ಮಾಡುತ್ತಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಉರುಫ್ ಸ್ಟಾರ್ ಚಂದ್ರು ಅವರು ಸಚಿವರು, ಸಂಸದರೊಂದಿಗೆ ಮಂಡ್ಯ ಲೋಕಸಭಾ ಕ್ಷೇತ್ರದ ಗ್ರಾಮಗಳಲ್ಲಿ ಸುಡು ಬಿಸಿಲನ್ನೂ ಲೆಕ್ಕಿಸದೆ ಬಿರುಸಿನ ಪ್ರಚಾರ ನಡೆಸಿದರು.

ಇದೇ ವೇಳೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಇಷ್ಟು ದಿನ ಮೌನ ವಹಿಸಿದ್ದರು, ಇಂದಿನಿಂದ ಮಂಡ್ಯ ಕ್ಷೇತ್ರದಲ್ಲಿ ಮತ ಹುಡುಕಾಟ ಆರಂಭಿಸಿದ್ದಾರೆ. ಇಂದು ಮಂಡ್ಯ ಲೋಕಸಭಾ ಕ್ಷೇತ್ರದ ಮಳವಳ್ಳಿ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮುಖಂಡರ ಜೊತೆ ಕುಮಾರಸ್ವಾಮಿ ಸಭೆ ನಡೆಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!