ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕಿನ ಕಲಕೋಟಿ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮೆಕ್ಕೆಜೋಳದ ಬಣವೆಗೆ ಬೆಂಕಿ ತಗುಲಿ ಹತ್ತಕ್ಕೂ ಹೆಚ್ಚು ಬಣವೆಗಳು ಸುಟ್ಟು ಕರಕಲಾದ ಘಟನೆ ನಡೆದಿದೆ.
ಗ್ರಾಮದ ರೈತರ 4 ಮೆಕ್ಕೆಜೋಳದ ತೆನೆಯ ರಾಶಿ, 6 ಮೇವಿನ ಬಣವೆಗಳು ಸುಟ್ಟು ಭಸ್ಮವಾಗಿದೆ. ರೈತರಾದ ದ್ಯಾಮಣ್ಣ ತಳವಾರ ಮತ್ತು ಮೃತ್ಯುಂಜಯ ಹಿರೇಮಠ ಸೇರಿದಂತೆ ಹಲವು ರೈತರು ಮೆಕ್ಕೆಜೋಳದ ರಾಶಿ ಮಾಡಲು ಹಾಕಿದ್ದರು.
ಸುಮಾರು 10 ಲಕ್ಷಕ್ಕೂ ಅಧಿಕ ಮೌಲ್ಯದ ಜೋಳದ ತೆನೆ ಸುಟ್ಟು ಕರಕಲಾಗಿದೆ. ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಈ ಪ್ರಕರಣ ಸವಣೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.