ಚುನಾವಣೆ ಬಿಝಿಯ ನಡುವೆಯೇ ಕೆಪಿಸಿಸಿಗೆ ಮೇಜರ್ ಸರ್ಜರಿ: ಐವರು ಕಾರ್ಯಾಧ್ಯಕ್ಷರ ನೇಮಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಚುನಾವಣೆ ಸಿದ್ಧತೆಯ ನಡುವೆಯೇ ಕೆಪಿಸಿಸಿಯಲ್ಲಿ ಮೇಜರ್ ಸರ್ಜರಿ ನಡೆದಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ತನ್ವೀರ್ ಸೇಠ್, ಜಿ.ಸಿ. ಚಂದ್ರಶೇಖರ್, ವಿನಯ್ ಕುಲಕರ್ಣಿ, ಮಂಜುನಾಥ್ ಭಂಡಾರಿ, ವಸಂತ್ ಕುಮಾರ್ ಅವರನ್ನು ಎಐಸಿಸಿ ನೇಮಿಸಿದ್ದು, ಇದೇ ಸಂದರ್ಭ ನಾಲ್ವರು ಕಾರ್ಯಾಧ್ಯಕ್ಷರನ್ನು ಬದಲಾವಣೆ ಮಾಡಿದೆ.

ಇನ್ನು ಪ್ರಚಾರ ಸಮಿತಿ ಅಧ್ಯಕ್ಷರಾಗಿ ವಿನಯ್ ಕುಮಾರ್ ಸೊರಕೆ, ಪ್ರಚಾರ ಸಮಿತಿ ಕೋ ಚೇರ್ಮನ್ ಆಗಿ ಎಲ್. ಹನುಮಂತಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ರಿಜ್ವಾನ್ ಅರ್ಷದ್ ಅವರನ್ನು ನೇಮಕ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!