ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 8 ಐಎಎಸ್ ಅಧಿಕಾರಿಗಳ ವರ್ಗಾವಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ಸರ್ಕಾರದಿಂದ 8 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.
ಅಮ್ಲನ್ ಆದಿತ್ಯ ಬಿಸ್ವಾಸ್, ಐಎಎಸ್ (ಕೆ.ಎನ್: 1997) ಪ್ರಾದೇಶಿಕ ಆಯುಕ್ತರು, ಬೆಳಗಾವಿ ವಿಭಾಗ, ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ, ಮುಂದಿನ ಆದೇಶದವರೆಗೆ ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ, ಬೆಂಗಳೂರು ವಿಭಾಗಕ್ಕೆ ವರ್ಗಾಯಿಸಿಸಲಾಗಿದೆ.
ಕ್ಯಾಪ್ಟನ್ ಡಾ. ರಾಜೇಂದ್ರ ಕೆ., ಐಎಎಸ್ (ಕೆ.ಎನ್: 2010) ಅವರನ್ನುಮುಂದಿನ ಆದೇಶದವರೆಗೆ ಸಹಕಾರ ಸಂಘಗಳ ರಿಜಿಸ್ಟ್ರಾರ್ ಮತ್ತು ಬೆಂಗಳೂರಿನ ಸಹಕಾರಿ ಲೆಕ್ಕಪರಿಶೋಧನಾ ನಿರ್ದೇಶಕರಾಗಿ ಪ್ರಸ್ತುತ ಖಾಲಿ ಇರುವ ಹುದ್ದೆಗಳಲ್ಲಿ ನೇಮಿಸಲಾಗಿದೆ. ಸುಂದರೇಶಬಾಬು ಎಂ., ಐಎಎಸ್ (ಕೆ.ಎನ್: 2012), ಜಿಲ್ಲಾಧಿಕಾರಿ, ಗದಗ ಜಿಲ್ಲೆ, ಇವರನ್ನು ವರ್ಗಾವಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ವ್ಯವಸ್ಥಾಪಕ ನಿರ್ದೇಶಕರು, ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್, ಬೆಂಗಳೂರ ಇಲ್ಲಿಗೆ ನೇಮಕ ಮಾಡಲಾಗಿದೆ.
ಸುರಳ್ಕರ್ ವಿಕಾಸ್ ಕಿಶೋರ್, ಐಎಎಸ್ (ಕೆ.ಎನ್: 2012), ಜಿಲ್ಲಾಧಿಕಾರಿ, ಕೊಪ್ಪಳ ಜಿಲ್ಲೆ , ಇವರನ್ನು ಮುಂದಿನ ಆದೇಶದವರೆಗೆ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಬೆಂಗಳೂರು ಇವರನ್ನು ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
ಹೊನ್ನಾಂಬ, ಐಎಎಸ್ (ಕೆ.ಎನ್: 2012), ಕಾರ್ಯದರ್ಶಿ, ಕರ್ನಾಟಕ ರಾಜ್ಯ ಚುನಾವಣಾ ಆಯೋಗ, ಬೆಂಗಳೂರು ಇವರನ್ನು ಜಿಲ್ಲಾಧಿಕಾರಿ, ಗದಗ ಜಿಲ್ಲೆಗೆ ವರ್ಗಾವಣೆ ಮಡಲಾಗಿದೆ.ಆರ್.ಲತಾ, ಐಎಎಸ್ (ಕೆ.ಎನ್: 2012), ಜಿಲ್ಲಾಧಿಕಾರಿ, ಚಿಕ್ಕಬಳ್ಳಾಪುರ ಜಿಲ್ಲೆ, ಅವರನ್ನು ಜಿಲ್ಲಾಧಿಕಾರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.ಲೋಖಂಡೆ ಸ್ನೇಹಲ್ ಸುಧಾಕರ್, ಐಎಎಸ್ (ಕೆ.ಎನ್: 2017) ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಸರ್ಕಾರದ ಉಪ ಕಾರ್ಯದರ್ಶಿಯಾಗಿ, ಉನ್ನತ ಶಿಕ್ಷಣ ಇಲಾಖೆ, ಬೆಂಗಳೂರು ಇಲ್ಲಿಗೆ ವರ್ಗಾವಣೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!