ಈ ಬಾರಿ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ, ಇದು ನೂರಕ್ಕೆ ನೂರರಷ್ಟು ಸತ್ಯ: ಮಾಜಿ ಸಿಎಂ ಬಿಎಸ್‌ವೈ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದು ಖಚಿತ, ಸೂರ್ಯ ಚಂದ್ರ ಎಷ್ಟು ಸತ್ಯವೋ ನಾವು ಗೆಲ್ಲುವುದೂ ಅಷ್ಟೇ ಸತ್ಯ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ನಾವು ನಾಲ್ಕು ತಂಡಗಳಾಗಿ ಎಲ್ಲೆಡೆ ವಿಜಯ ಸಂಕಲ್ಪ ಯಾತ್ರೆ ಮಾಡಿದ್ದೇವೆ, ಅಲ್ಲಿ ನಮಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಬಿಜೆಪಿ ಅಧಿಕಾರಕ್ಕೆ ಬರೋದು ಶತಸಿದ್ಧ ಎಂದಿದ್ದಾರೆ.

ಎಲ್ಲಾ ಸಂಸದರು ಚುನಾವಣೆ ಮುಗಿಯುವವರೆಗೂ ಅವರವರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಇನ್ನೇನು ಶೀಘ್ರದಲ್ಲೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡುತ್ತೇವೆ ಎಂದಿದ್ದಾರೆ. ನಮಗೆ ಜನಮನ್ನಣ ಇದೆ, ಶಿವಮೊಗ್ಗ ಏರ್‌ಪೋರ್ಟ್ ಉದ್ಘಾಟನೆ ವೇಳೆ ಎರಡು ಲಕ್ಷ ಮಂದಿ ಸೇರಿದ್ದರು. ಬೇರೆ ಪಕ್ಷಗಳು ಭೀತಿಯಿಂದ ಇವೆ, ನಮ್ಮ ಸಮ ಯಾರಿಲ್ಲ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!