February 10, 2026
Tuesday, February 10, 2026
spot_img

ಶಬರಿಮಲೆಯಲ್ಲಿ ಮಕರ ಜ್ಯೋತಿಯ ದರುಶನ: ಮುಗಿಲು ಮುಟ್ಟಿದ ಭಕ್ತರ ಜಯಘೋಷ

ಹೊಸದಿಗಂತ ಡಿಜಿಟಲ್ ಡೆಸ್ಕ್;

ಮಕರ ಸಂಕ್ರಾಂತಿಯಂದು ಕೇರಳದ ಶಬರಿಮಲೆಯಲ್ಲಿ ಸಂಭವಿಸುವ ಮಕರ ಜ್ಯೋತಿಯನ್ನು ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡಿದ್ದಾರೆ.

ಅಯ್ಯಪ್ಪ ದೇಗುಲದ ಎದುರಿನ ಪೊನ್ನಂಬಲಮೇಡುವಿನಲ್ಲಿ ಸಂಜೆ 6:45 ಕ್ಕೆ ಮಕರ ಜ್ಯೋತಿ ದರುಶನವಾಯಿತು.

ಶಬರಿಮಲೆಯಿಂದ 4 ಕಿಲೋಮೀಟರ್ ದೂರದಲ್ಲಿರುವ ಪೊನ್ನಂಬಲಮೇಡುವಿನಲ್ಲಿ ಮಕರ ಜ್ಯೋತಿಯ ಅಮೃತ ಘಳಿಗೆಗಾಗಿ ಕಾದಿದ್ದ ಲಕ್ಷಾಂತರ ಭಕ್ತರು ಜ್ಯೋತಿಯ ಬೆಳಕನ್ನು ನೋಡಿ ಕಣ್ತುಂಬಿಕೊಂಡರು.

ಪಂದಳ ರಾಜಮನೆತನದಿಂದ ಆಭರಣಗಳನ್ನು ತಂದು ಆಯ್ಯಪ್ಪ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಇದೇ ಸಂದರ್ಭದಲ್ಲಿ ಮಹಾಮಂಗಳಾರತಿ ವೇಳೆಗೆ ಜ್ಯೋತಿರೂಪದಲ್ಲಿ ಅಯ್ಯಪ್ಪ ಕಾಣಿಸಿಕೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !