ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಲಹೆಗಾರ ಬಿಭವ್ ಕುಮಾರ್ ಅವರಿಗೆ ದೆಹಲಿ ನ್ಯಾಯಾಲಯವು ನಾಲ್ಕು ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಬಿಭವ್ ಅವರ ವಕೀಲರು ಸಿಸಿಟಿವಿ ಮತ್ತು ಡಿವಿಆರ್ ದೃಶ್ಯಗಳ ಸಂಗ್ರಹ ಮತ್ತು ಸಂರಕ್ಷಣೆಗಾಗಿ ಅರ್ಜಿ ಸಲ್ಲಿಸಿದ್ದಾರೆ. ಈ ಸಿಸಿಟಿವಿಗಳು ನನ್ನ ಪ್ರಕರಣದ ಸತ್ಯಾಸತ್ಯತೆ ಸಾಬೀತುಪಡಿಸುತ್ತವೆ ಎಂದು ವಕೀಲರು ನ್ಯಾಯಾಲಯದಲ್ಲಿ ವಾದಿಸಿದ್ದಾರೆ.
ಅನುಮತಿಯಿಲ್ಲದೆ ಸಿಎಂ ಸಿವಿಲ್ ಲೈನ್ಸ್ ಮನೆಗೆ ನುಗ್ಗಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಸ್ವಾತಿ ಮಲಿವಾಲ್ ವಿರುದ್ಧ ಬಿಭವ್ ಕುಮಾರ್ ಪ್ರತಿದೂರು ದಾಖಲಿಸಿದ್ದರು. ದೂರು ದಾಖಲಾದ ತಕ್ಷಣ ದೆಹಲಿ ಪೊಲೀಸರು ಆತನನ್ನು ಬಂಧಿಸಿದ್ದರು.