ಹೊಸದಿಗಂತ ವರದಿ,ಕಲಬುರಗಿ:
ಮುಳುಗುವ ಹಡುಗಿಗೆ ನಾವಿಕನಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್ ಪಕ್ಷ ನೇಮಕ ಮಾಡುವ ಮೂಲಕ ಅವರನ್ನು ಬಲೀ ಕಾ ಬಕ್ರಾ ಮಾಡಿದ್ದಾರೆ ಎಂದು ಮದ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ ಲೇವಡಿ ಮಾಡಿದ್ದಾರೆ.
ಬಿಜೆಪಿ ಹಿಂದೂಳಿದ ವಗ೯ಗಳ ವಿರಾಟ್ ಸಮಾವೇಶದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು,ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಂದ ಕಾಂಗ್ರೆಸ್ ಉಳಿಸಲು ಆಗುತ್ತಿಲ್ಲ.ಹೀಗಾಗಿ ಕಾಂಗ್ರೆಸ್ ಮುಳುಗುವ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಅವರನ್ನು ಹರಕೆಯ ಕುರಿ ಮಾಡಿದ್ದಾರೆ ಎಂದರು.
ಬಕ್ರೀದ್ ಮೇ ಬಚೆಂಗೆ ತೋ ಮೊಹರಂ ಮೇ ನಾಚೆಂಗೆ ಎಂದು ಖುದ್ದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ದುದೈ೯ವದ ಸಂಗತಿ, ಅವರೇ ಖುದ್ದು ಹರಕೆಯ ಕುರಿಯಾಗಿದ್ದನ್ನು ಒಪ್ಪಿಕೊಂಡಿದ್ದಾರೆ ಎಂದು ಲೇವಡಿ ಮಾಡಿದರು.
ಕೇಂದ್ರದಲ್ಲಿ ಮೋದಿ ನೇತೃತ್ವದಲ್ಲಿ ಭಾರತ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿದೆ.ಇಡೀ ವಿಶ್ವವೇ ಮೋದಿಯವರ ಆಡಳಿತ ವೈಖರಿಯನ್ನು ಮೆಚ್ಚಿಕೊಂಡು,ಗುಣಗಾನ ಮಾಡುತ್ತಿದ್ದಾರೆ ಎಂದು ಹಷ೯ ವ್ಯಕ್ತಪಡಿಸಿದರು.
1947ರಲ್ಲಿ ಅಖಂಡ ಭಾರತವನ್ನು ತುಂಡು ಮಾಡಿದ್ದು ಇದೇ ಕಾಂಗ್ರೆಸ್, ನ ನೆಹರೂ. ಇಂದು ರಾಹುಲ್ ಬಾಬಾ ಭಾರತ ಜೋಡೋ ಯಾತ್ರಾ ಮಾಡುತ್ತಿದ್ದಾರೆ. ತುಕಡೇ ಮಾಡಿದವರಿಂದಲೇ ಜೋಡೋ ಅಭಿಯಾನ ನಡೆದಿದೆ ಎಂದರು.