ಹೊಸದಿಗಂತ ವರದಿ, ವಿಜಯಪುರ:
ಜಿಲ್ಲೆಯಲ್ಲಿ ಕೌಟುಂಬಿಕ ಕಲಹದಿಂದ ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ
ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಶರಣಸೋಮನಾಳ ಗ್ರಾಮದ ಮೆಹಿಬೂಬ್ ಮಕಾನದಾರ (45) ಬಂಧಿತ ಆರೋಪಿ.
ಆರೋಪಿ ಮೆಹಿಬೂಬ್ ಮಕಾನದಾರ ಈತ, ತನ್ನ ಪತ್ನಿ ಬಿಸ್ಮಿಲ್ಲಾ ಮಕಾನದಾರ (40) ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಈ ಸಂಬಂಧ ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.