ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ, ಪ್ರಧಾನಿ ಮೋದಿ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ದೆಹಲಿಯ ಪ್ರಸಾದ್ ನಗರ ಪ್ರದೇಶದ ಕರೋಲ್ ಬಾಗ್ನಲ್ಲಿ ಆರೋಪಿ ಹೇಮಂತ್ನನ್ನು ಪೊಲೀಸರು ಬಂಧಿಸಿದ್ದಾರೆ. ಆತ ಕುಡಿದ ಮತ್ತಿನಲ್ಲಿ ಪೊಲೀಸರಿಗೆ ಫೋನ್ ಮಾಡಿದ್ದ ಎಂದು ತಿಳಿದುಬಂದಿದೆ.
ಆರು ವರ್ಷಗಳಿಂದ ನಿರುದ್ಯೋಗಿಯಾಗಿರುವ ಹೇಮಂತ್ ಮದ್ಯವ್ಯಸನಿಯಾಗಿದ್ದ. ಆತ ಕುಡಿತದ ಮತ್ತಿನಲ್ಲಿ ರಾತ್ರಿ ಪೊಲೀಸರಿಗೆ ಕರೆ ಮಾಡಿ ಪ್ರಧಾನಿ ಮೋದಿಯನ್ನು ಕೊಲೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದ.