ಹೊಸದಿಗಂತ ವರದಿ ವಿಜಯಪುರ:
ನಗರದ ಐತಿಹಾಸಿಕ ಸ್ಮಾರಕ ಉಪ್ಪಲಿ ಬುರಜ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ.
ವಿಜಯಪುರದ ಚಂದಾಬಾವಡಿ ನಿವಾಸಿ ಖಾಜಾ ನದಾಫ್ ಮೃತಪಟ್ಟಿರುವ ವ್ಯಕ್ತಿ.
ಖಾಜಾ ನದಾಫ್ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಕಾರಣ ತಿಳಿದು ಬಂದಿಲ್ಲ. ಈ ಘಟನೆಯ ಬಳಿಕ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
ನಗರದ ಗಾಂಧಿಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.