ಆರ್ಥಿಕ ಮುಗ್ಗಟ್ಟು, ಮೈಕ್ರೋ ಫೈನಾನ್ಸ್ ಹಾವಳಿಗೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ

ಹೊಸದಿಗಂತ ವರದಿ, ಮಡಿಕೇರಿ:

ಆರ್ಥಿಕ ಮುಗ್ಗಟ್ಟು ಹಾಗೂ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಬೇಸತ್ತು ವ್ಯಕ್ತಿಯೊಬ್ಬರು ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಗರದಲ್ಲಿ ನಡೆದಿದೆ.

ದೇವಜನ ಜಗದೀಶ್ (56) ಎಂಬುವರೇ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.

‘ಆರ್ಥಿಕ ಮುಗ್ಗಟ್ಟು ಹಾಗೂ ಮೈಕ್ರೋ ಫೈನಾನ್ಸ್’ನವರ ಹಾವಳಿಯಿಂದ ಬೇಸತ್ತು ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಡೆತ್ ನೋಟ್’ನಲ್ಲಿ ಬರೆದಿರುವುದಾಗಿ ಹೇಳಲಾಗಿದೆ.

ಮಡಿಕೇರಿ ನಗರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!