ಮಾನಸಿಕ ಅಸ್ವಸ್ಥ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಹೊಸದಿಗಂತ ವರದಿ, ಕಲಬುರಗಿ
ಮಾನಸಿಕ ಅಸ್ವಸ್ಥ ಯುವಕನೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ನಗರದ ಸರ್ಕಾರಿ ಐಟಿಐ ಕಾಲೇಜಿನ ಆವರಣದಲ್ಲಿ ಹಗರಿಬೊಮ್ಮನಹಳ್ಳಿಯ ನಿವಾಸಿ ಶ್ರೀನಿವಾಸ 38 ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ.
ಮಾನಸಿಕ ಅಸ್ವಸ್ಥತೆಯಿದ್ದ ಯುವಕ ಶ್ರೀನಿವಾಸ ಹಲವಾರು ಜಿಲ್ಲೆಗಳಲ್ಲಿ ಸುತ್ತಾಡುತ್ತಿದ್ದನು. ಕೆಲದಿನಗಳಿಂದ ಕಲಬುರಗಿಯಲ್ಲಿ ಇದ್ದ ಆತ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈ ಸಂಬಂಧ ಸ್ಟೇಷನ್ ಬಜಾರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!