ನಿರ್ಮಾಣ ಹಂತದಲ್ಲಿನ ಕಟ್ಟಡದಿಂದ ಆಯತಪ್ಪಿ ಬಿದ್ದ ಕೂಲಿ ಕಾರ್ಮಿಕ ಸಾವು

ಹೊಸದಿಗಂತ ವರದಿ, ಮೈಸೂರು:

ನಿರ್ಮಾಣ ಹಂತದಲ್ಲಿನ ಕಟ್ಟಡದಿಂದ ಆಯತಪ್ಪಿ ಬಿದ್ದ ಕೂಲಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಮೈಸೂರಿನ ಎನ್.ಆರ್.ಮೊಹಲ್ಲಾದ ಉಸ್ಮಾನಿಯಾ ಬ್ಲಾಕ್‌ನಲ್ಲಿ ನಡೆದಿದೆ.
ಸಿದ್ದರಾಜು(70) ಮೃತ ದುರ್ದೈವ. ಮೈಸೂರಿನ ಕೆಸರೆ ನಿವಾಸಿಯಾದ ಈತ ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದರ ಮೊದಲನೆ ಮಹಡಿಯಲ್ಲಿ ಗಾರೆ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಬಿದ್ದು ಕೆಳಗ್ಗೆ ಬಿದ್ದಿದ್ದು, ತೀವ್ರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಎನ್.ಆರ್.ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!