ದೇವಸ್ಥಾನದ ಕಳಸಾರೋಹಣದ ವೇಳೆ ಕ್ರೇನ್‌ ಬಕೆಟ್‌ ಮುರಿದು ವ್ಯಕ್ತಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹಾನಗಲ್ ತಾಲೂಕು ಶೇಷಗಿರಿ ಗ್ರಾಮದಲ್ಲಿನ ಗಂಗಾಪರಮೇಶ್ವರಿ ಕಳಸಾರೋಹಣ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ಕ್ರೇನ್​ನ ಬಕೇಟ್ ಮುರಿದು ಕೆಳಗೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವನಿಗೆ ಗಂಭೀರವಾಗಿ ಗಾಯವಾಗಿದೆ. ಮಂಜು ಪಾಟೀಲ (42) ಮೃತ ದುರ್ದೈವಿ. ಮಂಜು ಬಡಿಗೇರ್ ಗಂಭೀರವಾಗಿ ಗಾಯಗೊಂಡಿದ್ದು, ಹಾನಗಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕ್ರೇನ್​ನ ಮೂಲಕ ಕಳಸ ಸ್ಥಾಪನೆ ಕಾರ್ಯ ನಡೆದಾಗ ಕ್ರೇನ್​ ಬಕೆಟ್​ ಮುರಿದು ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಅಡೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ. ಕ್ರೇನ್ ಮಾಲೀಕನ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!