ಹೊಸದಿಗಂತ ಡಿಜಿಟಲ್ ಡೆಸ್ಕ್:
ಭದ್ರಾವತಿಯ ವೀರಪುರ ಗ್ರಾಮದ ಬಳಿ ಕೆಎಸ್ಆರ್ಟಿಸಿ ಬಸ್ನಿಂದ ಹಾರಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ನಂದೀಶ್ ಬಸ್ನಿಂದ ಹಾರಿದ್ದು, ಇವರು ಮಾನಸಿಕವಾಗಿ ಅಸ್ವಸ್ಥರಾಗಿದ್ದರು ಎನ್ನಲಾಗಿದೆ.
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಂದೀಶ್, ಚಿಕಿತ್ಸೆ ನಂತರ ಬಸ್ ಹತ್ತಿದ್ದು, ಭದ್ರಾವತಿಯ ವೀರಾಪುರ ಬಳಿ ಬಸ್ನಿಂದ ಹಾರಿ ಮೃತಪಟ್ಟಿದ್ದಾರೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.