ನದಿಗೆ ಹಾರಿ ಯುವಕ ಆತ್ಮಹತ್ಯೆ

ಹೊಸದಿಗಂತ ವರದಿ, ಮಂಗಳೂರು:

ನಗರದ ಹೊರವಲಯದ ಹಳೆಯಂಗಡಿ ಬಳಿಯ ಪಾವಂಜೆ ಎಂಬಲ್ಲಿ ಯುವಕನೊಬ್ಬ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಮೃತ ಯುವಕನನ್ನು ಸುಚೇಂದ್ರ ಕುಮಾರ್ (39)ಎಂದು ಗುರುತಿಸಲಾಗಿದೆ.
ಪಾವಂಜೆ ಸೇತುವೆ ಮೇಲೆ ಬೈಕ್ ನಿಲ್ಲಿಸಿದ ಸುಚೇಂದ್ರ ಕುಮಾರ್ ನದಿಗೆ ಹಾರಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಮುಲ್ಕಿ ಠಾಣಾ ಪೊಲೀಸರು ಸ್ಥಳೀಯರ ಸಹಕಾರದಿಂದ ಆತನನ್ನು ನದಿಯಿಂದ ಮೇಲೆ ತಂದಿದ್ದಾರೆ. ಆದರೆ ಅಷ್ಟರಲ್ಲಾಗಲೇ ಯುವಕ ಮೃತಪಟ್ಟಿದ್ದ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.
ಶಿವಮೊಗ್ಗದಲ್ಲಿ ಇಂಜಿನಿಯರ್ ವೃತ್ತಿ ಮಾಡಿಕೊಂಡಿದ್ದ ಸುಚೇಂದ್ರ ಸುರತ್ಕಲ್ ಚೇಳೈರುವಿನಲ್ಲಿರುವ ತನ್ನ ಪತ್ನಿಯ ಮನೆಗೆ ಆಗಮಿಸಿದ್ದು, ಪೂರ್ವಾಹ್ನ 11 ರ ನಂತರ ಮನೆಯಿಂದ ಹೊರ ಹೋಗಿದ್ದರು ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!