ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುಡಿದ ಮತ್ತಿನಲ್ಲಿ ಪತ್ನಿಯನ್ನು ಪತಿ ಕೊಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಬೆಳಗಾಗುವ ತನಕ ಪರಿವೆಯಿಲ್ಲದೆ ಮಲಗಿದ್ದ ವ್ಯಕ್ತಿ ನಶೆ ಇಳಿದ ಮೇಲೆ ಹೆಂಡತಿಯನ್ನು ತಾನೆ ಕೊಲೆ ಮಾಡಿರುವುದಾಗಿ ತಿಳಿದು ಶಾಕ್ಗೆ ಗುರಿಯಾಗಿದ್ದಾನೆ. ಮನೆಯಿಂದ ಪರಾರಿಯಾಗುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ.
ಶುಕ್ರವಾರ ರಾತ್ರಿ ಪತಿ-ಪತ್ನಿ ಇಬ್ಬರೂ ಮದ್ಯ ಸೇವಿಸಿದ್ದಾರೆ. ಈ ವೇಳೆ ಊಟ ಬಡಿಸಲು ಪತ್ನಿ ನಿರಾಕರಿಸಿದ್ದಕ್ಕೆ ಕೋಪಗೊಂಡ ಕುಡುಕ ಪತಿ, ಆಕೆ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿ ರಾತ್ರಿಯಿಡೀ ಶವದ ಪಕ್ಕದಲ್ಲೇ ಮಲಗಿದ್ದಾನೆ. ಮರುದಿನ ಪತ್ನಿ ಕೊಲೆಯಾಗಿದ್ದನ್ನು ಅರಿತು ಮನೆಯಲ್ಲಿದ್ದ 40,000 ರೂಪಾಯಿ ಹಣದೊಂದಿಗೆ ಪರಾರಿಯಾಗುತ್ತಿದ್ದಾಗ, ದೆಹಲಿ ಪೊಲೀಸರು ಮತ್ತೊಂದು ಶಾಖೆಯ ಪೊಲೀಸರ ಸಹಾಯದಿಂದ ಬಂಧಿಸಿದ್ದಾರೆ.
ಆರೋಪಿಯನ್ನು ಸುಲ್ತಾನಪುರದ ವಿನೋದ್ ಕುಮಾರ್ ದುಬೆ ಎಂದು ಗುರುತಿಸಲಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ ಫೋನ್ ಮಾಡಿ ಕುಡಿದ ಅಮಲಿನಲ್ಲಿ ತನ್ನ ಪತ್ನಿಯನ್ನು ದಿಂಬಿನಿಂದ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ. ಪೊಲೀಸರು ಸ್ಥಳದಲ್ಲಿ ವಿಚಾರಣೆ ನಡೆಸಿದ್ದು, ಆತನಿಂದ 43,280 ರೂಪಾಯಿ ನಗದು, ಎರಡು ಔಷಧಿ ಬಾಟಲಿಗಳು ಮತ್ತು ರಕ್ತಸಿಕ್ತ ದಿಂಬನ್ನು ವಶಪಡಿಸಿಕೊಂಡಿದ್ದಾರೆ.