ಹೊಸದಿಗಂತ ವರದಿ, ವಿಜಯಪುರ:
ಸ್ನಾನಕ್ಕೆ ಹೋಗಿದ್ದ ವ್ಯಕ್ತಿ ಕಾಲು ಜಾರಿ ಕಾಲುವೆ ನೀರಲ್ಲಿ ಬಿದ್ದು ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಮೊರಟಗಿ ಗ್ರಾಮದ ಬಳಿ ಬುಧವಾರ ನಡೆದಿದೆ.
ಮೃತಪಟ್ಟವನನ್ನು ಮೂಲತಃ ಮಧ್ಯಪ್ರದೇಶದ ನಿವಾಸಿ ಹಾಗೂ ಮೊರಟಗಿ ಗ್ರಾಮದ ಡಾಲ್ಫಿನ್ ಡಾಬಾದಲ್ಲಿ ಕೆಲಸ ಮಾಡುತ್ತಿದ್ದ ಮಹೇಶ ಎಂದು ಗುರುತಿಸಲಾಗಿದೆ.
ಮಹೇಶ ಈತನು ಸ್ನಾನ ಮಾಡಲು ಹೋಗಿದ್ದ ವೇಳೆ ಕಾಲುವೆಯಲ್ಲಿ ಬಿದ್ದು ಸಾವಿಗೀಡಾಗಿದ್ದಾನೆ.
ಘಟನಾ ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.