ಹೊಸದಿಗಂತ ಡಿಜಿಟಲ್ ಡೆಸ್ಕ್:
ಜುಲೈ 21 ರಂದು ಮ್ಯಾನ್ ಹೋಲ್ಗೆ ಇಳಿದಿದ್ದ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಸಾವನಪ್ಪಿದ್ದ ಘಟನೆ ಬೆಂಗಳೂರಿನ ಆರ್ಎಂಸಿ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.
ಸಾವಿರ ರೂ. ಹಣ ಕೊಟ್ಟು ಮ್ಯಾನ್ ಹೋಲ್ಗೆ ಇಳಿಸಿ ಆ ಸಾವಿಗೆ ಕಾರಣವಾದವರು ಇದೀಗ ಜೈಲಿನಲ್ಲಿ ಮುದ್ದೆ ಮುರಿಯುವಂತಾಗಿದೆ. ಆಶ್ರಯ ನಗರದ ನಿವಾಸಿಗಳಾದ ನಾಗರಾಜ್, ಆಂಥೋನಿ, ದೇವರಾಜ್ ಮತ್ತು ಆನಂದ್ ಬಂಧಿತರು.
ಮ್ಯಾನ್ ಹೋಲ್ಗೆ ಕಾರ್ಮಿಕರನ್ನ ಇಳಿಸಬಾರದೆಂಬ ಸುಪ್ರೀಂಕೋರ್ಟ್ ಕಾನೂನು ದೇಶದಲ್ಲಿ ದೊಡ್ಡ ಕ್ರಾಂತಿಗೆ ಕಾರಣವಾಗಿತ್ತು. ಆದರೂ ಇಂತ ಕೆಲಸಗಳು ಆಗಾಗ ನಡೆಯುತ್ತಿರುತ್ತವೆ. ಜುಲೈ 21 ರಂದು ಬೆಂಗಳೂರನ ಆರ್ಎಂಸಿ ಯಾರ್ಡ್ನ ಆಶ್ರಯ ನಗರದಲ್ಲಿ ಪುಟ್ಟಸ್ವಾಮಿ ಎಂಬಾತ ಹಣದ ಆಸೆಗೆ ಮ್ಯಾನ್ ಹೋಲ್ಗೆ ಇಳಿದು ತನ್ನ ಜೀವವನ್ನೇ ಕಳೆದುಕೊಂಡಿದ್ದ. ಈ ಕೇಸ್ ಸಂಬಂಧ ಪೊಲೀಸರು ನಾಲ್ವರನ್ನ ಬಂಧಿಸಿದ್ದಾರೆ.