ಮಂದಣ್ಣ ಹೋದ್ರು. ಮಂದಾನ ಬಂದ್ರು ಇಷ್ಟೇ ಲೈಫ್: ಸಾಹಿತಿ ಕವಿರಾಜ್ ಪೋಸ್ಟ್ ವೈರಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೊದಲ ಬಾರಿಗೆ ಮಹಿಳಾ ಪ್ರೀಮಿಯರ್ ಲೀಗ್ ಗಾಗಿ ಮುಂಬೈನಲ್ಲಿ ನಡೆದ ಹರಾಜು ಪ್ರಕ್ರಿಯೆ ನಡೆದಿತ್ತು. ಈ ವೇಳೆ ಭಾರತದ ಖ್ಯಾತ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ಆರ್‌ಸಿಬಿ ಪಾಲಾಗಿದ್ದಾರೆ.

3.4 ಕೋಟಿ ರೂಪಾಯಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಖರೀದಿ ಮಾಡಿದೆ.

ಸ್ಮೃತಿ ಮಂದಾನ ತಂಡಕ್ಕೆ ಸೇರ್ಪಡೆಯಾಗುತ್ತಿದ್ದಂತೆ ಆರ್‌ಸಿಬಿ ಅಭಿಮಾನಿಗಳ ಸಂಭ್ರಮ ಜೋರಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಸ್ಮೃತಿ ಪೋಟೋ ಶೇರ್ ಮಾಡಿ ಸಂಭ್ರಮಿಸುತ್ತಿದ್ದಾರೆ.

ಸ್ಯಾಂಡಲ್ ವುಡ್ ನಿರ್ದೇಶಕ, ಚಿತ್ರಸಾಹಿತಿ ಕವಿರಾಜ್ ಈ ಬಗ್ಗೆ ಪೋಸ್ಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ವಿಶೇಷ ಎಂದರೆ ಕವಿರಾಜ್ ನಟಿ ರಶ್ಮಿಕಾ ಮಂದಣ್ಣ ಕಾಲೆಳೆದು ಸೃತಿ ಮಂದಾನರನ್ನು ಸ್ವಾಗತಿಸಿದ್ದಾರೆ.

ಈ ಸಂತಸವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿರುವ ಕವಿರಾಜ್ ‘ಮಂದಣ್ಣ ಹೋದ್ರು, ಮಂದಾನ ಬಂದಿದ್ದಾರೆ’ ಎಂದು ಹೇಳಿದ್ದಾರೆ.

‘ಮಂದಣ್ಣ ಹೋದ್ರು. ಮಂದಾನ ಬಂದ್ರು. ಇಷ್ಟೇ ಲೈಫ್. ಕಳ್ಕೊಂಡಾಗ ಕುಗ್ಗಬಾರದು’ ಎಂದು ಹೇಳಿದ್ದಾರೆ. ಜೀವನ ಪ್ರತಿಯೊಬ್ಬರಿಗೂ ಉತ್ತಮ ಆಫರ್ ನೀಡುತ್ತದೆ’ ಎಂದು ಹೇಳಿದ್ದಾರೆ.
ಕವಿರಾಜ್ ಪೋಸ್ಟ್‌ಗೆ ನೆಟ್ಟಿಗರು ತರಹೇವಾರಿ ಕಾಮೆಂಟ್ ಮಾಡುತ್ತಿದ್ದಾರೆ. ಜೊತೆಗೆ ಮಂದಾನ ಅವರನ್ನು ಅದ್ದೂರಿಯಾಗಿ ಸ್ವಾಗತಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!