ಮಂಡ್ಯ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಿ.ಪಿ. ಉಮೇಶ್‌ಗೆ ಸಹಕಾರಿ ರತ್ನ ಪ್ರಶಸ್ತಿ

ಹೊಸದಿಗಂತ ವರದಿ, ಮಂಡ್ಯ
ರಾಜ್ಯ ಸಹಕರ ಚಳವಳಿಯ ಬೆಳವಣಿಗೆಗೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ರಾಜ್ಯಸರ್ಕಾರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಸಿ.ಪಿ.ಉಮೇಶ್ ಅವರಿಗೆ ಸಹಕಾರ ರತ್ನ ಪ್ರಶಸ್ತಿ ಘೋಷಿಸಿದೆ.
ಬೆಂಗಳೂರು ಕೆಂಗೇರಿ ಉಪನಗರದ ಗಣೇಶ ಮೈದಾನದಲ್ಲಿ ಮಾ.20ರಂದು ನಡೆಯುವ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರು ಪ್ರಶಸ್ತಿಯನ್ನು ನೀಡಿ ಗೌರವಿಸಲಿದ್ದಾರೆ.
ಸಿ.ಪಿ.ಉಮೇಶ್ ಅವರು ಬ್ಯಾಂಕ್ ಅಧ್ಯಕ್ಷರಾದ ನಂತರದಲ್ಲಿ ಆಡಳಿತಾತ್ಮಕ ಚಟುವಟಿಕೆಗಳಿಗೆ ಚುರುಕು ನೀಡಿದ್ದು, ಬ್ಯಾಂಕ್ ಸಾಲ ವಿತರಣೆ, ವಸೂಲಿಯಲ್ಲಿ ಪ್ರಗತಿ ಸಾಧಿಸುವಂತೆ ಮಾಡಿದ್ದಾರೆ.
ಗ್ರಾಮೀಣ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮೊಬೈಲ್ ಬ್ಯಾಂಕ್ ವಾಹನಗಳನ್ನು ಸಂಚಾರಕ್ಕೆ ಬಿಟ್ಟಿದ್ದಾರೆ. ಡಿಸಿಸಿ ಬ್ಯಾಂಕ್ ಪ್ರಸಕ್ತ ಸಾಲಿನಲ್ಲಿ ಲಾಭದಾಯಕವಾಗಿ ಮುನ್ನಡೆಯಲು ಪ್ರಮುಖ ಕಾರಣಕರ್ತರಾಗಿದ್ದಾರೆ. ಬ್ಯಾಂಕಿಗೆ ಬರುವ ಗ್ರಾಹಕರೊಂದಿಗೆ ಉತ್ತಮ ಬಾಂಧವ್ಯವನ್ನಿಟ್ಟುಕೊಂಡು ಅವರಿಗೆ ಅನುಕೂಲ ಕಲ್ಪಿಸಿಕೊಟ್ಟು ಬ್ಯಾಂಕ್ ಸುಗಮವಾಗಿ ವ್ಯವಹರಿಸಲು ನೆರವಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!