ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಹಲವು ಕ್ಷೇತ್ರಗಳಲ್ಲಿ ಕಣಕ್ಕಿಳಿಯೋದು ಯಾರು ಎನ್ನುವ ಪ್ರಶ್ನೆಗಳು ಎದುರಾಗಿವೆ. ಇದೀಗ ಮಂಡ್ಯದಲ್ಲಿಯೂ ಇಂಥದ್ದೇ ಚರ್ಚೆ ಎದುರಾಗಿದೆ.
ಅಲ್ಲಿನ ಬಿಜೆಪಿ ನಾಯಕರು ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಎಂದರೆ ಜೆಡಿಎಸ್ ನಾಯಕರು ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿ ಎಂದು ಒತ್ತಾಯಿಸುತ್ತಿದ್ದಾರೆ.
ಈ ಬಗ್ಗೆ ಇಂದು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಸಭೆ ನಡೆಸಿದ್ದಾರೆ. ಯಾರು ಕಣಕ್ಕಿಳಿಯಬೇಕು ಎನ್ನುವ ಬಗ್ಗೆ ಚರ್ಚೆ ನಡೆದಿದ್ದು, ಜೆಡಿಎಸ್ ಹಿರಿಯರು ನಿಖಿಲ್ ಕುಮಾರಸ್ವಾಮಿಯ ಮನವೊಲಿಸಿ ಎಂದು ಒತ್ತಾಯಿಸಿದರು. ಆದರೆ ಈಗಾಗಲೇ ನಿಖಿಲ್ ಸ್ಪರ್ಧೆ ಮಾಡೋದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.