ಮಂಡ್ಯ ಲೋಕಸಭಾ ಟಿಕೆಟ್ ಫೈಟ್: ಸಂಸದೆ ಸುಮಲತಾ ನಿವಾಸದಲ್ಲಿ ಮಹತ್ವದ ಸಭೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಗಾಗಿ ಸಂಸದೆ ಸುಮಲತಾ ಭಾರಿ ಕಸರತ್ತು ನಡೆಸಿದ್ದು, ಮುಂದಿನ ನಡೆ ಬಗ್ಗೆ ಚರ್ಚಿಸಲು ಸುಮಲತಾ ಹಾಗೂ ಬೆಂಬಲಿಗರು ಮಹತ್ವದ ಸಭೆ ನಡೆಸಿದ್ದಾರೆ.

ಬೆಂಗಳೂರಿನ ಜೆ.ಪಿ.ನಗರದ ನಿವಾಸದಲ್ಲಿ ಸಂಸದೆ ಸುಮಲತಾ, ಮಂಡ್ಯ ಕ್ಷೇತ್ರದ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದಾರೆ.ಇದೇ ವೇಳೆ ಚಾಲೇಂಜಿಂಗ್ ಸ್ಟಾರ್ ದರ್ಶನ್ ಸಂಸದೆ ಸುಮಲತಾ ನಿವಾಸಕ್ಕೆ ಆಗಮಿಸಿದ್ದು ಸಭೆ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

ಆರಂಭದಲ್ಲಿ ಸುಮಲತಾ ನಟ ದರ್ಶನ್ ಅವರೊಂದಿಗೆ ಚರ್ಚೆ ನಡೆಸಿದ್ದು, ನಂತರ ಮಂಡ್ಯ ಕ್ಷೇತ್ರದ ಮುಖಂಡರ ಜೊತೆ ಚರ್ಚೆ ನಡೆಸಿದ್ದಾರೆ. ಈ ಮಧ್ಯೆ ಇಂಡವಾಳು ಸಚ್ಚಿದಾನಂದ ಕೂಡ ಸುಮಲತಾ ನಿವಾಸಕ್ಕೆ ಆಗಮಿಸಿದ್ದು, ಸಚ್ಚಿದಾನಂದ ಮನವೊಲಿಕೆ ಯತ್ನ ಕೂಡ ನಡೆದಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!