ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ ಖಚಿತ, ವರಿಷ್ಠರು ಅಧಿಕೃತ ಘೋಷಣೆ ಮಾಡ್ತಾರೆ: ನಿಖಿಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಡ್ಯದಿಂದ ಕುಮಾರಸ್ವಾಮಿ ಅವರ ಸ್ಪರ್ಧೆಯೇ ಅಂತಿಮ. ಪಕ್ಷದ ಮುಖಂಡರು ಅಧಿಕೃತವಾಗಿ ಹೆಸರು ಪ್ರಕಟಿಸಲಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಜೆ.ಪಿ.ನಗರದ ನಿವಾಸದಲ್ಲಿ ಮಾತನಾಡಿದ ಅವರು, ಕೋರ್ ಕಮಿಟಿ ಸಭೆಯಲ್ಲಿ ಮಂಡ್ಯ ಮತ್ತು ಕೋಲಾರ ಜಿಲ್ಲೆಗಳ ಕುರಿತು ಚರ್ಚಿಸಲಾಗಿದೆ. ಮಂಡ್ಯಕ್ಕೆ ಕುಮಾರಸ್ವಾಮಿ ಹೆಸರು ಅಧಿಕೃತವಾಗಿದೆ.

ಜೆಡಿಎಸ್ ಕಾರ್ಯಕರ್ತರು ಹಾಗೂ ಮಂಡ್ಯ ಮುಖಂಡರ ಒತ್ತಾಯದ ಮೇರೆಗೆ ಕುಮಾರಸ್ವಾಮಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಮಂಡ್ಯ ಜಿಲ್ಲೆಗೆ ಆಗಿರುವ ಅನ್ಯಾಯ ಸರಿಪಡಿಸಬೇಕು. ಕುಮಾರಸ್ವಾಮಿ ರಾಜ್ಯ ನಿಷ್ಠೆ ತೋರುತ್ತಿದ್ದಾರೆ. ಬಿಜೆಪಿ ಹೈಕಮಾಂಡ್ ಕೂಡ ರಾಜ್ಯದ ಒಳಿತಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ನಂಬಿದೆ. ಅಭ್ಯರ್ಥಿಯ ಬಗ್ಗೆ ಆಡಳಿತ ಮಂಡಳಿ ಅಧಿಕೃತ ಘೋಷಣೆ ಮಾಡಲಿದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!