ಮಂಗಳೂರು ಬ್ಯಾಂಕ್​ ದರೋಡೆ ಕೇಸ್: ಮೂವರು ಆರೋಪಿಗಳ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರಿನ ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್​ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಬ್ಯಾಂಕ್​ನಲ್ಲಿ ಸುಮಾರು 10ರಿಂದ 12 ಕೋಟಿಯನ್ನು ದರೋಡೆ ಮಾಡಿದ ಬಳಿಕ ಆರೋಪಿಗಳು ತಿರುವನ್ವೇಲಿಗೆ ಪರಾರಿಯಾಗಿದ್ದರು. ಇದೀಗ ಮಂಗಳೂರು ಪೊಲೀಸರು ಕಾರ್ಯಚರಣೆ ನಡೆಸಿ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಬಗ್ಗೆ ಖುದ್ದು ಮಂಗಳೂರು ಪೊಲೀಸ್​​ ಆಯುಕ್ತ ಅನುಪಮ್ ಅಗರ್ವಾಲ್​ ಖಚಿತಪಡಿಸಿದ್ದು,ಮುರುಗನ್, ಪ್ರಕಾಶ್ ಅಲಿಯಾಸ್ ಜೈಸ್ವಾ, ಮಣಿವಣ್ಣನ್ ಬಂಧಿತರು ದರೋಡೆಕೋರರು ಎಂದು ತಿಳಿದುಬಂದಿದೆ.

ತಮಿಳುನಾಡಿನ ವಿವಿಧ ಪ್ರದೇಶದಲ್ಲಿ ಮೂವರು ಆರೋಪಿಗಳ ಬಂಧನವಾಗಿದೆ. ಬಂಧಿತರಿಂದ 2 ಗೋಣಿಚೀಲ, ತಲ್ವಾರ್‌, 2 ಪಿಸ್ತೂಲ್‌ ಜಪ್ತಿ ಮಾಡಿದ್ದೇವೆ. ಬಂಧಿತ ಆರೋಪಿಗಳು ತಮಿಳುನಾಡಿನ ತಿರುನೆಲ್ವೇಲಿ ಮೂಲದವರು ಎಂದು ಸ್ಪಷ್ಟಪಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕು ಕೆ.ಸಿ.ರೋಡ್‌ನ ಶಾಖೆಯಲ್ಲಿ ಜನವರಿ 17ರಂದು ಕೋಟೆಕಾರು ಬ್ಯಾಂಕ್​​ನಲ್ಲಿ ದರೋಡೆ ಮಾಡಿದ್ದರು. ಮಹಾರಾಷ್ಟ್ರದ ಕಾರು ಬಳಸಿ ಕೋಟೆಕಾರು ಬ್ಯಾಂಕ್​​ನಲ್ಲಿ ಕೃತ್ಯವೆಸಗಿದ್ದರು. ಬ್ಯಾಂಕ್ ದರೋಡೆ ಬಳಿಕ ತಮಿಳುನಾಡಿನ ತಿರುನೆಲ್ವೇಲಿಗೆ ಪರಾರಿ ಆಗಿದ್ದರು. ಬಂಧಿತ ಆರೋಪಿಗಳು ತಮಿಳುನಾಡಿನ ತಿರುನೆಲ್ವೇಲಿ ಮೂಲದವರು ಎಂದು ಮಾಹಿತಿ ನೀಡಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!