ಹೊಸದಿಗಂತ ವರದಿ, ಮಂಗಳೂರು:
ಭಾರಿ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ.
ಸುಬ್ರಹ್ಮಣ್ಯ ಸುತ್ತಲಿನ ಪ್ರದೇಶದಲ್ಲಿ ಸೋಮವಾರ ಭಾರಿ ಮಳೆಯಾಗಿದ್ದು, ಕೆಲವೆಡೆ ಮಂಗಳವಾರವೂ ಮುಂದುವರೆದಿದೆ. ಭಾರಿ ಪ್ರವಾಹ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗುತ್ತಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ