ಹೊಸದಿಗಂತ ವರದಿ ಮಂಗಳೂರು:
ಇಲ್ಲಿನ ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಕದ್ರಿ ಪದವು ವಾರ್ಡ್ ಕಾರ್ಪೋರೇಟರ್, ಬಿಜೆಪಿಯ ಜಯಾನಂದ ಅಂಚನ್, ಉಪಮೇಯರ್ ಆಗಿ ಸೆಂಟ್ರಲ್ ಮಾರ್ಕೆಟ್ ವಾರ್ಡ್ ಸದಸ್ಯೆ, ಬಿಜೆಪಿಯ ಪೂರ್ಣಿಮಾ ಆಯ್ಕೆಯಾದರು.
ಮಂಗಳೂರು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮೈಸೂರು ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ. ಪ್ರಕಾಶ್ ಅವರ ನೇತೃತ್ವದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದ ಚುನಾವಣೆಯಲ್ಲಿ ಈ ಆಯ್ಕೆ ನಡೆಯಿತು.
ಕಾಂಗ್ರೆಸ್ನಿಂದ ಮೇಯರ್ ಸ್ಥಾನಕ್ಕೆ ಶಶಿಧರ ಹೆಗ್ಡೆ, ಉಪಮೇಯರ್ ಸ್ಥಾನಕ್ಕೆ ಝೀನತ್ ಸಂಶುದ್ದೀನ್ ಸ್ಪರ್ಧಿಸಿದ್ದರು. ಬಿಜೆಪಿಯ ಅಭ್ಯರ್ಥಿಗಳು ತಲಾ 46 ಮತ ಪಡೆದು ಮೇಯರ್ ಮತ್ತು ಉಪಮೇಯರ್ ಆಗಿ ಆಯ್ಕೆಯಾದರು.
ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಒಟ್ಟು 60 ಸದಸ್ಯರಿದ್ದು, ಬಿಜೆಪಿ 44, ಕಾಂಗ್ರೆಸ್ 14, ಎಸ್ಡಿಪಿಐನ ಇಬ್ಬರು ಸದಸ್ಯರಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪರವಾಗಿ ಶಾಸಕರಾದ ಡಿ.ವೇದವ್ಯಾಸ ಕಾಮತ್, ಡಾ.ವೈ ಭರತ್ ಶೆಟ್ಟಿ ಮತ ಚಲಾಯಿಸಿದರು. ಎಸ್ ಡಿಪಿಐನ ಇಬ್ಬರು ಸದಸ್ಯರು ತಟಸ್ಥರಾಗಿದ್ದರು.