ಮಂಗಳೂರು- ಉಡುಪಿ ರಾ. ಹೆದ್ದಾರಿಯಲ್ಲಿ ಭೀಕರ ಅಪಘಾತ: ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ದಾರುಣ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಮಂಗಳೂರು- ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸಮೀಪ ಕೊಪ್ಪಲಂಗಡಿ ಕಮ್ಯುನಿಟಿ ಹಾಲ್ ಬಳಿ ಬಸ್ ಡಿಕ್ಕಿ ಹೊಡೆದು ಪಾದಾಚಾರಿ ಮಹಿಳೆ ದಾರುಣವಾಗಿ ಮೃತ ಪಟ್ಟ ಘಟನೆ ಶುಕ್ರವಾರ ಸಂಜೆಯ ವೇಳೆಯಲ್ಲಿ ನಡೆದಿದೆ.
ಮೃತರನ್ನು ಮಲ್ಲಾರು ರವಿಂದ್ರನಾಥ ಶೆಟ್ಟಿ ಅವರ ಪತ್ನಿ ಸಪ್ನಾ ಶೆಟ್ಟಿ (54) ಎಂದು ಗುರುತಿಸಲಾಗಿದೆ.
ಮನೆಗೆ ಬೇಕಾದ ಸಾಮಾನು ಖರೀದಿಸಲು ಆಗಮಿಸಿದ್ದ ವೇಳೆಯಲ್ಲಿ ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಸಾವಿಗಿಡಾಗಿದ್ದಾರೆ.
ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!