ಮಂಗಳೂರಿನ ಶಿಕ್ಷಣ ಇಲಾಖೆ ನೌಕರ ಮಡಿಕೇರಿಯಲ್ಲಿ ಆತ್ಮಹತ್ಯೆ

ಹೊಸದಿಗಂತ ವರದಿ ಮಡಿಕೇರಿ:
ಮಂಗಳೂರಿನ ಶಿಕ್ಷಣ ಇಲಾಖೆಯ ನೌಕರರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಡಿಕೇರಿಯ ಲಾಡ್ಜ್ ಒಂದಲ್ಲಿ ನಡೆದಿದೆ.
ಮಂಗಳೂರಿನ ಶಿಕ್ಷಣ ಇಲಾಖೆಯಲ್ಲಿ ನೌಕರನಾಗಿರುವ ಶಿವಾನಂದ್ (45) ಎಂಬವರೇ ಮೃತಪಟ್ಟವರು.
ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಬಳಿಯ ಲಾಡ್ಜ್’ನಲ್ಲಿ ಶಿವಾನಂದ್ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಸಹೋದರ ಕೃಷ್ಣಾನಂದ ನೀಡಿರುವ ದೂರನ್ನು ದಾಖಲಿಸಿಕೊಂಡಿರುವ ಮಡಿಕೇರಿ ನಗರ ಠಾಣಾ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!