ಮಂಗಳೂರಿನಲ್ಲಿ ಗುಂಪು ಹಲ್ಲೆ ಕೇಸ್​: ಇನ್​​ಸ್ಪೆಕ್ಟರ್ ಸೇರಿ ಮೂವರು ಅಮಾನತು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕುಡುಪು ಬಳಿ ನಡೆದಿದ್ದ ಕೇರಳ ಮೂಲದ ಮುಸ್ಲಿಂ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್‌ ಸೇರಿ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಕರ್ತವ್ಯ ಲೋಪ ಆರೋಪದಡಿ ಇನ್ಸ್‌ಪೆಕ್ಟರ್‌ ಶಿವಕುಮಾರ್, ಹೆಡ್ ಕಾನ್ಸ್‌ಟೇಬಲ್ ಚಂದ್ರ.ಪಿ ಮತ್ತು ಕಾನ್ಸ್‌ಟೇಬಲ್‌ ಯಲ್ಲಾಲಿಂಗ ಅವರನ್ನು ಅಮಾನತು ಮಾಡಲಾಗಿದೆ. ಮೂವರ ವಿರುದ್ಧ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದ ಆರೋಪ ಕೇಳಿ ಬಂದಿತ್ತು.

ಶಿವಕುಮಾರ್ ಆರಂಭದಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಿದ್ದರು. ವಿವಾದ ದೊಡ್ಡದಾದ ಮೇಲೆ ಕೊಲೆ ಪ್ರಕರಣ ದಾಖಲಿಸಿದ್ದರು. ಇದಾದ ಬಳಿಕ ಶಿವಕುಮಾರ್ ಅವರನ್ನು ಅಮಾನತು ಮಾಡುವಂತೆ ಗೃಹ ಸಚಿವರಿಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!