ಬಳ್ಳಾರಿ ಉತ್ಸವದಲ್ಲಿ ಧೂಳೆಬ್ಬಿಸಿದ ಗಾಯಕಿ ಮಂಗ್ಲಿ

ಹೊಸದಿಗಂತ ವರದಿ ಬಳ್ಳಾರಿ:

ಬಳ್ಳಾರಿ ಉತ್ಸವದ ಮುಖ್ಯ ವೇದಿಕೆಯಲ್ಲಿ ಶನಿವಾರ ಸಂಜೆ ನಡೆದ ರಸಮಂಜರಿ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕಿ ಮಂಗ್ಲಿ ಅವರು ವಿವಿಧ ಹಾಡುಗಳನ್ನು ಪ್ರಸ್ತುತಪಡಿಸಿ ಮೂಲಕ ನೆರೆದ ಲಕ್ಷಾಂತರ ಜನರನ್ನು ರಂಜಿಸಿದರು. ಕಾರ್ಯಕ್ರಮದಲ್ಲಿ ಮೊದಲಿಗೆ ಡಾ. ರಾಜಕುಮಾರ್ ಅಭಿನಯದ ಆಕಸ್ಮಿಕ ಚಿತ್ರದ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡುವ ಮೂಲಕ ಸಂಗೀತ ರಸಮಂಜರಿ ಪ್ರಾರಂಭಿಸಿದರು.

ಕಣ್ಣು ಹೊಡಿಯಾಕ ಮೊನ್ನೆ ಕಲತೇನಿ…, ಯಾವನೋ ಇವನು ಗಿಲ್ಲಕ್ಕೊ ಏಳೇಳು ಬೆಟ್ಟ ದಾಟ್ಕೊಂಡು ಬಂದ ಶಿವ ಗಿಲ್ಲಕ್ಕೊ….ಸಾರಗಂದ ದರ್ಗಾ….ಊ ಅಂತಿಯಾ ಮಾವ ಊಹು ಅಂತಿಯಾ…ರಾಮಾ‌ ರಾಮಾ…ಎಣ್ಣೆಗೂ ಹೆಣ್ಣಿಗೂ ಎಲ್ಲಿಂದ ಲಿಂಕಿಟ್ಟೆ ಹೇಳೋ ಭಗವಂತ, ರಾಮುಲೋ ರಾಮುಲೋ, ರಾ ರಾ ರಕ್ಕಮ್ಮ, ಹಾಡಿಗಳನ್ನು ಪ್ರಸ್ತುತ ಪಡಿಸುವ ಮೂಲಕ ಗಾಯಕಿ ಮಂಗ್ಲಿ ಅವರು ನೆರೆದ ಜನರನ್ನು ಕುಣಿಸಿ ಕುಪ್ಪಳಿಸಿ, ತಾವೂ ಅವರೊಂದಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು.

ನಟ ಪುನಿತ್ ರಾಜಕುಮಾರ್ ಅವರಿಗಾಗಿ ಬೊಂಬೆ ಹೇಳುತೈತೆ, ಮತ್ತೆ ಹೇಳುತೈತೆ ನೀನೇ ರಾಜಕುಮಾರ ಹಾಡಿಗೆ ನೆರೆದ ಜನಸ್ತೋಮವನ್ನು ರಂಜಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!