ಮಣಿಪುರದಲ್ಲಿ 2ನೇ ಹಂತದ ಚುನಾವಣೆ ವೇಳೆ ಹಿಂಸಾಚಾರ: ಬಿಜೆಪಿ ಕಾರ್ಯಕರ್ತನ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಣಿಪುರದಲ್ಲಿ ಇಂದು ವಿಧಾನಸಭೆಯ ಎರಡನೇ ಹಂತದ ಮತದಾನ ನಡೆಯುತ್ತಿದ್ದ ವೇಳೆ ಹಿಂಸಾರ ನಡೆದಿದ್ದು, ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಈ ಬಗ್ಗೆ ಮಾಹಿತಿ ನೀಡಿದ ಪೊಲೀಸರು, ಮೊದಲ ಹಂತದ ಚುನಾವಣೆಯಲ್ಲಿ ಒಬ್ಬ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದರು. ಈಗ ಇಬ್ಬರ ಹತ್ಯೆಯಾಗಿದೆ.
ಸೇನಾಪತಿ ಜಿಲ್ಲೆಯ ಕರೋಂಗ್ ಕ್ಷೇತ್ರದಲ್ಲಿನ ಮತಗಟ್ಟೆ ಕೇಂದ್ರದ ಬಳಿ ಬಿಜೆಪಿ ಕಾರ್ಯಕರ್ತ ಎಲ್. ಅಮುಬಾ ಸಿಂಗ್ (25) ರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಕೊಲೆಗೆ ಸಂಬಂಧಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮತ್ತೊಂದು ಕಡೆಯಲ್ಲಿ ಮತಗಟ್ಟೆಯಿಂದ ವಿದ್ಯುನ್ಮಾನ ಮತಯಂತ್ರಗಳನ್ನು ಕಸಿದುಕೊಳ್ಳಲು ಪ್ರಯತ್ನಿಸಿದ ಇಬ್ಬರು ವ್ಯಕ್ತಿಗಳ ಮೇಲೆ ಕರ್ತವ್ಯ ನಿರತ ಭದ್ರತಾ ಸಿಬ್ಬಂದಿ ಗುಂಡಿನ ದಾಳಿ ನಡೆಸಿರುವ ಪರಿಣಾಮ ಒಬ್ಬ ಮೃತಪಟ್ಟಿದ್ದು, ಮತ್ತೋರ್ವ ವ್ಯಕ್ತಿ ಗಾಯಗೊಂಡಿದ್ದಾನೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!