Sunday, December 10, 2023

Latest Posts

ಸಹಜ ಸ್ಥಿತಿಯತ್ತ ಮಣಿಪುರ: ಇಂಟರ್ನೆಟ್​​​ ನಿರ್ಬಂಧ ತೆರವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಣಿಪುರ ಹಿಂಸಾಚಾರದಿಂದ ನಿರ್ಬಂಧ ಹೇರಲಾಗಿದ್ದ ಇಂಟರ್ನೆಟ್​​​ ವ್ಯವಸ್ಥೆಯನ್ನು ಮತ್ತೆ ಯಥಾಸ್ಥಿತಿಗೆ ತರಲು ಸರಕಾರ ನಿರ್ಧರಿಸಿದೆ.

ಮೇ 3ರಂದು ಜನಾಂಗೀಯ ಘರ್ಷಣೆಗಳು ಭುಗಿಲೆದ್ದು, ನಂತರ ಅದು ವಿಕೋಪಕ್ಕೆ ಹೋಗಿ ಹಲವು ಅಹಿತಕರ ಘಟನೆಗಳು ನಡೆದು ಇಡೀ ರಾಜ್ಯವೇ ಬೂದಿ ಮುಚ್ಚಿದ ಕೆಂಡದಂತಾಗಿತ್ತು. ಅಲ್ಲಿನ ಅನೇಕರು ಮನೆ-ಪ್ರಾಣ ಎಲ್ಲವನ್ನು ಕಳೆದುಕೊಂಡಿದ್ದರು. ಇನ್ನು ಸಾಮಾಜಿಕ ಜಾಲತಾಣದಲ್ಲಿ ಮಣಿಪುರ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿ ಮತ್ತೆ ಹಿಂಸಾಚಾರಕ್ಕೆ ಕಾರಣವಾಗುತ್ತಿತ್ತು. ಈ ಪುಕಾರುಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಇಂಟರ್ನೆಟ್​​​ ವ್ಯವಸ್ಥೆಯನ್ನು ಸ್ಥಗಿತಗೊಳಿಸಿತ್ತು. ಇದೀಗ ಈ ನಿರ್ಬಂಧವನ್ನು ತೆರವು ಮಾಡಲಾಗಿದೆ ಎಂದು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ (biren singh) ಅವರು ಇಂದು (ಸೆ.23) ಹೇಳಿದ್ದಾರೆ.

ಸೆ.22ರಿಂದ 15 ದಿನಗಳೊಳಗೆ ತಮ್ಮಲ್ಲಿರುವ ಅಕ್ರಮ ಶಸ್ತ್ರಾಸ್ತ್ರಗಳನ್ನು ಸರ್ಕಾರಕ್ಕೆ ಒಪ್ಪಿಸುವಂತೆ ಸೂಚನೆ ನೀಡಿದ ನಂತರ ಈ ಪ್ರಕಟಣೆಯನ್ನು ಹೊರಡಿಸಲಾಗಿದೆ.

ಒಂದು ವೇಳೆ ಸರ್ಕಾರ ತಿಳಿಸಿದ 15 ದಿನಗಳೊಳಗೆ ಅಕ್ರಮ ಶಸ್ತ್ರಾಸ್ತ್ರಗಳನ್ನು ಒಪ್ಪಿಸದಿದ್ದರೆ. ಕೇಂದ್ರ ಮತ್ತು ರಾಜ್ಯದ ಎರಡೂ ಭದ್ರತಾ ಪಡೆಗಳು ರಾಜ್ಯದಾದ್ಯಂತ ಕಾರ್ಯಚರಣೆ ನಡೆಸಲಾಗುವುದು. ಜತೆಗೆ ಕಾನೂನು ಪ್ರಕಾರ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಪ್ರಕಟಣೆ ಹೇಳಿದೆ. ಈ ಶಸ್ತ್ರಾಸ್ತ್ರ ಹಿಡಿದುಕೊಂಡು ಅನೇಕ ದುಷ್ಕರ್ಮಿಗಳು/ಗುಂಪುಗಳು ಜನರ ಮೇಲೆ ದಾಳಿ ಮಾಡುತ್ತಿದೆ. ರಾಜ್ಯದಲ್ಲಿ ಇದರಿಂದ ಸುಲಿಗೆ, ಬೆದರಿಕೆ ಮತ್ತು ಅಪಹರಣಗಳ ಪ್ರಕರಣ ಹೆಚ್ಚಾಗುವ ಸಾಧ್ಯತೆ ಇದೆ. ಇಂತಹ ಘಟನೆಗಳು ಕಂಡು ಬಂದರೆ ಖಂಡಿತ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!