ದೆಹಲಿ ಅಬಕಾರಿ ಹಗರಣ: ಜೂನ್ 2ರ ವರೆಗೆ ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ದೆಹಲಿಯ ಮಾಜಿ ಸಚಿವ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿಯು​ ಜೂನ್‌ 1ರ ವರೆಗೆ ವಿಸ್ತರಣೆ ಮಾಡಲಾಗಿದೆ.

ವಿಚಾರಣೆ ವೇಳೆ ಮನೀಶ್ ಸಿಸೋಡಿಯಾ ಅವರು ಕುರ್ಚಿ, ಮೇಜು ಮತ್ತು ಪುಸ್ತಕಗಳಿಗೆ ಬೇಡಿಕೆ ಇಟ್ಟಿದ್ದು, ಅದಕ್ಕೆ ನ್ಯಾಯಾಲಯವು ಒಪ್ಪಿಗೆ ಸೂಚಿಸಿದೆ. ಅದೇ ಸಮಯದಲ್ಲಿ ನ್ಯಾಯಾಲಯದಿಂದ ಹೊರಬರುವಾಗ, ದೆಹಲಿ ಸೇವೆಗಳ ಕುರಿತು ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯ ಬಗ್ಗೆ ಮಾಧ್ಯಮಗಳು ಮನೀಶ್ ಸಿಸೋಡಿಯಾ ಅವರನ್ನು ಪ್ರಶ್ನಿಸಿದಾಗ, ಪ್ರಧಾನಿ ಮೋದಿ ತುಂಬಾ ಸೊಕ್ಕಿನ ಮನುಷ್ಯ ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ ಎಂದು ಹೇಳಿದ್ದಾರೆ.

ಅಬಕಾರಿ ಹಗರಣದ ಇಡಿ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿ ಮುಗಿದ ನಂತರ, ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆದರೆ ಅಲ್ಲಿ ಮತ್ತೊಮ್ಮೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ.

ಅಧ್ಯಯನದ ಉದ್ದೇಶಕ್ಕಾಗಿ ಕುರ್ಚಿ ಮತ್ತು ಮೇಜು ಒದಗಿಸುವಂತೆ ಅವರ ಮನವಿಯನ್ನು ಪರಿಗಣಿಸುವಂತೆ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!