ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಶಂಕಿತ ಮಾವೋವಾದಿಗಳು ಚುನಾವಣೆ ಬಹಿಷ್ಕಾರಕ್ಕೆ ಕರೆ ನೀಡಿದ್ದಾರೆ.
ನಾಲ್ವರು ಶಸ್ತ್ರಸಜ್ಜಿತ ಮಾವೋವಾದಿಗಳು ತಳಪ್ಪುಳ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಮಾಲ ಪ್ರದೇಶದಲ್ಲಿ ಸ್ಥಳೀಯರನ್ನು ಭೇಟಿ ಮಾಡಿ ಚುನಾವಣೆ ಬಹಿಷ್ಕರಿಸುವಂತೆ ಮನವಿ ಮಾಡಿದರು.
ಸಿ.ಪಿ. ಮೊಯ್ಲಿನ್ ನೇತೃತ್ವದ ನಾಲ್ವರು ನಕ್ಸಲರು ಹಾಗೂ ಇಬ್ಬರು ಹೋರಾಟಗಾರರು ಬಂದು ಚುನಾವಣೆಯಲ್ಲಿ ಮತ ಹಾಕಿದರೂ ಪ್ರಯೋಜನವಾಗಲ್ಲ. ಚುನಾವಣೆ ಬಹಿಷ್ಕರಿಸುವಂತೆ ಸ್ಥಳೀಯರಿಗೆ ಕರೆ ನೀಡಿದ್ದಾರೆ. ಸುಮಾರು 20 ನಿಮಿಷಗಳ ಕಾಲ ಸ್ಥಳೀಯರೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಸ್ಥಳೀಯರೊಂದಿಗೆ ವಾಗ್ವಾದ ನಡೆಸಿ ಕಾಡಿಗೆ ಮರಳಿದ್ದಾರೆ.
ಮಕ್ಕಿಮಲ ಅರಣ್ಯ ಪ್ರದೇಶಕ್ಕೆ ಮರಳಿದ ನಕ್ಸಲರ ಪತ್ತೆಗೆ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ವಯನಾಡು ಕ್ಷೇತ್ರದಲ್ಲಿ ಶುಕ್ರವಾರ, ಏಪ್ರಿಲ್ 26 ರಂದು ಮತದಾನ ನಡೆಯಲಿದೆ.