ಹೊಸದಿಗಂತ ಡಿಜಿಟಲ್ ಡೆಸ್ಕ್:
ಛತ್ತೀಸ್ಗಢದ ನಿಷೇಧಿತ ಸಿಪಿಐ (ಮಾವೋವಾದಿ) ಕೊಂಟಾ ಪ್ರದೇಶ ಸಮಿತಿ ಸದಸ್ಯರು, ಭಾನುವಾರ ತಡರಾತ್ರಿ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಚಿಂತೂರು ಏಜೆನ್ಸಿ ಪ್ರದೇಶದ ಸರಿವೇಳ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ಗೆ ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿದ್ದಾರೆ.
ಭಾನುವಾರ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಕೊಟ್ಟೂರಿನಲ್ಲಿ ಮಾವೋವಾದಿಗಳು ಬಸ್ ತಡೆದು, ಪ್ರಯಾಣಿಕರನ್ನು ಕೆಳಗಿಳಿಸಿ ಬಸ್ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಪ್ರಯಾಣಿಕರು ಗಾಬರಿಯಿಂದ ಗುರಾಯಿ ಸರ್ವೆ ಗ್ರಾಮದ ಕೆಲ ಮನೆಗಳಲ್ಲಿ ಆಶ್ರಯ ಪಡೆದು ಇಂದು ಬೆಳಗ್ಗೆ ಚಿಂತೂರು ತಲುಪಿದ್ದಾರೆ.
ಘಟನೆಯಲ್ಲಿ ಕೆಲ ಪ್ರಯಾಣಿಕರು ಗಾಯಗೊಂಡಿದ್ದು, ಚಿಂತೂರು ಏರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಕುರಿತು ಚಿಂತೂರು ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ತನಿಖೆ ನಡೆಸುತ್ತಿದ್ದಾರೆ.