ಮಾರ್ಚ್‌ 3ರಂದು ಬೆಂಗಳೂರಿಗೆ ಅಮಿತ್‌ ಶಾ: ನಗರದಲ್ಲಿ ಪೊಲೀಸ್‌ ಅಧಿಕಾರಿಗಳಿಂದ ಸರಣಿ ಸಭೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಗೆ ಮಾ.3ರಂದು ಕೇಂದ್ರ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ.

ಈ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸ್‌ ಅಧಿಕಾರಿಗಳಿಂದ ಸರಣಿ ಸಭೆ ನಡೆಯುತ್ತಿದ್ದು, ಅಮಿತ್‌ ಶಾ ಬೆಂಗಳೂರಿಗೆ ಭೇಟಿ ಹಾಗೂ ಚುನಾವಣೆ ತಯಾರಿ ಸಂಬಂಧ ಸಭೆ ನಡೆಯುತ್ತಿದೆ. ಬೆಂಗಳೂರು ನಗರ ಪೊಲೀಸ್‌ ಆಯುಕ್ತರ ನೇತೃತ್ವದಲ್ಲಿ ಸರಣಿ ಸಭೆ ನಡೆಯುತ್ತಿದೆ. ಇದೀಗ ಡಿಜೆ ಮತ್ತು ಐಜಿಪಿ ನೇತೃತ್ವದಲ್ಲಿ ಮತ್ತೊಂದು ಸಭೆ ನಡೆಯುತ್ತಿದೆ.

ಮಾರ್ಚ್‌ 3ರಂದು ಬೆಂಗಳೂರಿಗೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ಆಗಮಿಸಲಿದ್ದು, ಇದೇ ವೇಳೆ ಕಮಿಷನರ್‌ ಕಚೇರಿಯ ಕಮಾಂಡ್‌ ಸೆಂಟರ್‌ ಗೆ ಭೇಟಿ ನೀಡಲಿದ್ದಾರೆ. ನಂತರ ಸೇಫ್‌ ಸಿಟಿ ಪ್ರಾಜೆಕ್ಟ್‌ ಚಾಲನೆ ನೀಡಲಿದ್ದಾರೆ. ಈ ಸಭೆಯಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳು ಭಾಗಿಯಾಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!