ಮದುವೆಯಾಗದ ಯುವಕರಿಗೆ ಮದುವೆ: ಚುನಾವಣಾ ಪ್ರಣಾಳಿಕೆಯಲ್ಲಿ ಹೀಗೊಂದು ಭರವಸೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 
 
ರಾಜ್ಯ ಚುನಾವಣೆ ಅಖಾಡದಲ್ಲಿ ಬಿರುಸಿನ ಮತ ಪ್ರಚಾರ ನಡೆಯುತ್ತಿದ್ದು, ಇದರ ಜೊತೆಗೆ ರಾಜಕೀಯ ಪಕ್ಷಗಳುಪ್ರಣಾಳಿಕೆ (Manifesto) ಬಿಡುಗಡೆ ಮಾಡುತ್ತಿವೆ. ಈ ನಡುವೆ ಬೆಳಗಾವಿಯ (Belagavi) ಪಕ್ಷೇತರ ಅಭ್ಯರ್ಥಿಗಳಿಬ್ಬರು ವಿನೂತನ ರೀತಿಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿ ಎಲ್ಲರೂ ಹುಬ್ಬೇರಿಸಿ ನೋಡುವಂತೆ ಮಾಡಿದ್ದಾರೆ.

ಅರಭಾವಿ (Arabhavi) ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಗುರುಪುತ್ರ ಕೆಂಪಣ್ಣ ಕುಳ್ಳೂರ ಹಾಗೂ ಗೋಕಾಕ್ (Gokak) ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪುಂಡಲೀಕ ಕುಳ್ಳೂರ ವಿಶೇಷವಾಗಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಮದುವೆಯಾಗದ ಯುವಕರಿಗೆ ಮದುವೆ ಮಾಡಿಸುವುದಾಗಿ ಅಭ್ಯರ್ಥಿಗಳು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದಾರೆ.


ಗುರುಪುತ್ರ ಕುಳ್ಳೂರ ಹಾಗೂ ಪುಂಡಲೀಕ ಕುಳ್ಳೂರ ಇಬ್ಬರೂ ಸಹೋದರರಾಗಿದ್ದು ಪಕ್ಷೇತರರಾಗಿ ಅರಭಾವಿ ಹಾಗೂ ಗೋಕಾಕ್‌ನಿಂದ ಸ್ಪರ್ಧೆಗೆ ಇಳಿದಿದ್ದಾರೆ. ಎರಡೂ ಮತಕ್ಷೇತ್ರದ ಮದುವೆಯಾಗದ ಯುವಕರಿಗೆ ಮದುವೆ ಮಾಡಿಸುವ ಭರವಸೆಯನ್ನು ಘೋಷಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!